ಮಂಡ್ಯ

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಪ್ರಕರಣ : ಆರು ಮಂದಿ ಸರ್ಕಾರಿ ಸಿಬ್ಬಂದಿ ಅಮಾನತ್ತು

ನಾಗಮಂಗಲ : ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸುಮಾರು 300 ಎಕರೆ ಸರ್ಕಾರಿ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಮಂಜೂರು ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆರು ಮಂದಿ ಸರ್ಕಾರಿ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ.

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ನಾಗಮಂಗಲ ತಹಸಿಲ್ದಾರ್ ಮತ್ತು ಇತರರ ವಿರುದ್ಧ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ಶೋಧನಾ ವಾರೆಂಟ್ ಹೊರಡಿಸಿ, ತನಿಖೆಗೆ ಆದೇಶ ನೀಡಿದ್ದರು. ಶೋಧನೆ ಮಾಡಿದ ನಂತರ 11 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ತಾಲ್ಲೂಕು ಕಚೇರಿ, ಆರೋಪಿಗಳ ಮನೆಗಳು ಸೇರಿದಂತೆ ಏಳು ಕಡೆಗಳಲ್ಲಿ ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದರು.

ದರಖಾಸ್ತು ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸತೀಶ್, ಭೂ ದಾಖಲೆಗಳ ವಿಭಾಗದ ದ್ವಿತೀಯ ದರ್ಜೆ ಸಹಾಯಕ ಯೋಗೇಶ್, ಹಾಗೂ ಕಾಂತಾಪುರ ವೃತ್ತದ ಗ್ರಾಮ ಸಹಾಯಕ ಎಸ್.ಯೋಗೇಶ್, ಶಿರಸ್ತೇದಾರ್ ಉಮೇಶ್, ಎಂಬ ಸರ್ಕಾರಿ ನೌಕರರ ಜೊತೆಗೆ ಯಶವಂತ್, ಚಿನ್ನಸ್ವಾಮಿ, ವಿಜಯಕುಮಾರ್, ನಾಗಮಂಗಲ ಪಟ್ಟಣವಾಸಿ ವಸೀಂ ಉಲ್ಲಾಖಾನ್ ಬಿನ್ ಕಲೀಂಉಲ್ಲಾ ಎಂಬ ಖಾಸಗಿ ವ್ಯಕ್ತಿ ಸೇರಿ ನಾಲ್ವರು ಆರೋಪಿಗಳ ವಿರುದ್ಧ ಭಾರತೀಯ ನಾಗರಿಕ ಸಂಹಿತೆ ಕಲಂ ೬೧ (೨), ೩೧೮(೪), ೩೩೫, ೩೩೬(೩), ೩೪೦(೨), ೩೦೩(೨), ೩೧೬(೫)ರ ಅಡಿಯಲ್ಲಿ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಎಲ್ಲರನ್ನೂ ಬಂಽಸಲಾಗಿದೆ. ಜೆಎಂಎಫ್‌ಸಿ ನ್ಯಾಯಾಲಯವು ಸದರಿ ಆರೋಪಿಗಳನ್ನು ೧೪ ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿರುತ್ತದೆ.

ದರಖಾಸ್ತು ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸತೀಶ್, ಭೂ ದಾಖಲೆಗಳ ವಿಭಾಗದ ದ್ವಿತೀಯ ದರ್ಜೆ ಸಹಾಯಕರಾದ ಯೋಗೇಶ್, ಗುರುಮೂರ್ತಿ, ವಿಜಯಕುಮಾರ್ ಅವರುಗಳನ್ನು ಜಿಲ್ಲಾಧಿಕಾರಿ ಅಮಾನತ್ತುಗೊಳಿಸಿದ್ದು, ದೇವಲಾಪುರ ನಾಡ ಕಛೇರಿ ಉಪ ತಹಸಿಲ್ದಾರ್ ರವಿಶಂಕರ್, ರೆಕಾರ್ಡ್ ರೂಂ ಶಿರಸ್ತೆದಾರ್ ಹೆಚ್.ಎಸ್.ಉಮೇಶ್ ಅವರನ್ನು ಪ್ರಾದೇಶಿಕ ಆಯುಕ್ತರು ಅಮಾನತ್ತುಗೊಳಿಸಿದ್ದಾರೆ. ಇವರ ವಿರುದ್ಧ ಶಿಸ್ತು ಕ್ರಮಕ್ಕಾಗಿ ಪ್ರಾದೇಶಿಕ ಆಯುಕ್ತರಿಗೆ ಜಿಲ್ಲಾಧಿಕಾರಿ ಪ್ರಸ್ತಾವನೆ ಸಲ್ಲಿಸಿದ್ದರು.

ಕಾಂತಾಪುರ ಗ್ರಾಮ ಸಹಾಯಕ ಎಸ್.ಯೋಗೇಶ್‌ನನ್ನು ತಾತ್ಕಾಲಿಕವಾಗಿ ಮತ್ತು ಮುಂದಿನ ಆದೇಶದವರೆಗೆ ಗ್ರಾಮ ಸಹಾಯಕ ಹುದ್ದೆಯ ಕರ್ತವ್ಯದಿಂದ ಬಿಡುಗಡೆಗೊಳಿಸಿರುತ್ತಾರೆ. ಸರ್ಕಾರಿ ದಾಖಲೆಗಳನ್ನು ಸಂರಕ್ಷಿಸಬೇಕಾದ ನಾಗಮಂಗಲ ತಾಲ್ಲೂಕು ತಹಸಿಲ್ದಾರ್, ಅಧೀನ ಸಿಬ್ಬಂದಿಗೆ ಅಕ್ರಮವಾಗಿ ದಾಖಲೆಗಳನ್ನು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿ ಕರ್ತವ್ಯ ಲೋಪವೆಸಗಿರುವ ಹಿನ್ನಲೆಯಲ್ಲಿ ತಹಸಿಲ್ದಾರ್ ಅವರಿಗೆ ಕಾರಣ ಕೇಳಿ ಜಿಲ್ಲಾಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ.

ಮತ್ತೊಬ್ಬನ ಬಂಧನ
ನಕಲಿ ದಾಖಲೆ ಸೃಷ್ಟಿ ಸಿ ಭೂಮಿ ಕಬಳಿಸಿರುವ ಪ್ರಕರಣಕ್ಕೆ ಸಂಬಂಽಸಿದಂತೆ ನಾಗಮಂಗಲ ಪಟ್ಟಣ ಪೋಲಿಸರು ಮತ್ತೊಬ್ಬ ಆರೋಪಿ ಬಂಧಿಸಿದ್ದಾರೆ. ವಿಜಯಕುಮಾರ್ ಬಂಧಿತ ಆರೋಪಿಯಾಗಿದ್ದು, ಈತ ತಹಸಿಲ್ದಾರ್ ಕಚೇರಿಯಲ್ಲಿ ಎಲ್.ಎನ್.ಡಿ ಶಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

21 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

21 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

21 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

21 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

21 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

21 hours ago