ಮಂಡ್ಯ

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಪ್ರಕರಣ : ಆರು ಮಂದಿ ಸರ್ಕಾರಿ ಸಿಬ್ಬಂದಿ ಅಮಾನತ್ತು

ನಾಗಮಂಗಲ : ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸುಮಾರು 300 ಎಕರೆ ಸರ್ಕಾರಿ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಮಂಜೂರು ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆರು ಮಂದಿ ಸರ್ಕಾರಿ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ.

ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ನಾಗಮಂಗಲ ತಹಸಿಲ್ದಾರ್ ಮತ್ತು ಇತರರ ವಿರುದ್ಧ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ಶೋಧನಾ ವಾರೆಂಟ್ ಹೊರಡಿಸಿ, ತನಿಖೆಗೆ ಆದೇಶ ನೀಡಿದ್ದರು. ಶೋಧನೆ ಮಾಡಿದ ನಂತರ 11 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ತಾಲ್ಲೂಕು ಕಚೇರಿ, ಆರೋಪಿಗಳ ಮನೆಗಳು ಸೇರಿದಂತೆ ಏಳು ಕಡೆಗಳಲ್ಲಿ ಮಂಗಳವಾರ ಏಕಕಾಲದಲ್ಲಿ ದಾಳಿ ನಡೆಸಿದ್ದರು.

ದರಖಾಸ್ತು ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸತೀಶ್, ಭೂ ದಾಖಲೆಗಳ ವಿಭಾಗದ ದ್ವಿತೀಯ ದರ್ಜೆ ಸಹಾಯಕ ಯೋಗೇಶ್, ಹಾಗೂ ಕಾಂತಾಪುರ ವೃತ್ತದ ಗ್ರಾಮ ಸಹಾಯಕ ಎಸ್.ಯೋಗೇಶ್, ಶಿರಸ್ತೇದಾರ್ ಉಮೇಶ್, ಎಂಬ ಸರ್ಕಾರಿ ನೌಕರರ ಜೊತೆಗೆ ಯಶವಂತ್, ಚಿನ್ನಸ್ವಾಮಿ, ವಿಜಯಕುಮಾರ್, ನಾಗಮಂಗಲ ಪಟ್ಟಣವಾಸಿ ವಸೀಂ ಉಲ್ಲಾಖಾನ್ ಬಿನ್ ಕಲೀಂಉಲ್ಲಾ ಎಂಬ ಖಾಸಗಿ ವ್ಯಕ್ತಿ ಸೇರಿ ನಾಲ್ವರು ಆರೋಪಿಗಳ ವಿರುದ್ಧ ಭಾರತೀಯ ನಾಗರಿಕ ಸಂಹಿತೆ ಕಲಂ ೬೧ (೨), ೩೧೮(೪), ೩೩೫, ೩೩೬(೩), ೩೪೦(೨), ೩೦೩(೨), ೩೧೬(೫)ರ ಅಡಿಯಲ್ಲಿ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಎಲ್ಲರನ್ನೂ ಬಂಽಸಲಾಗಿದೆ. ಜೆಎಂಎಫ್‌ಸಿ ನ್ಯಾಯಾಲಯವು ಸದರಿ ಆರೋಪಿಗಳನ್ನು ೧೪ ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿರುತ್ತದೆ.

ದರಖಾಸ್ತು ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸತೀಶ್, ಭೂ ದಾಖಲೆಗಳ ವಿಭಾಗದ ದ್ವಿತೀಯ ದರ್ಜೆ ಸಹಾಯಕರಾದ ಯೋಗೇಶ್, ಗುರುಮೂರ್ತಿ, ವಿಜಯಕುಮಾರ್ ಅವರುಗಳನ್ನು ಜಿಲ್ಲಾಧಿಕಾರಿ ಅಮಾನತ್ತುಗೊಳಿಸಿದ್ದು, ದೇವಲಾಪುರ ನಾಡ ಕಛೇರಿ ಉಪ ತಹಸಿಲ್ದಾರ್ ರವಿಶಂಕರ್, ರೆಕಾರ್ಡ್ ರೂಂ ಶಿರಸ್ತೆದಾರ್ ಹೆಚ್.ಎಸ್.ಉಮೇಶ್ ಅವರನ್ನು ಪ್ರಾದೇಶಿಕ ಆಯುಕ್ತರು ಅಮಾನತ್ತುಗೊಳಿಸಿದ್ದಾರೆ. ಇವರ ವಿರುದ್ಧ ಶಿಸ್ತು ಕ್ರಮಕ್ಕಾಗಿ ಪ್ರಾದೇಶಿಕ ಆಯುಕ್ತರಿಗೆ ಜಿಲ್ಲಾಧಿಕಾರಿ ಪ್ರಸ್ತಾವನೆ ಸಲ್ಲಿಸಿದ್ದರು.

ಕಾಂತಾಪುರ ಗ್ರಾಮ ಸಹಾಯಕ ಎಸ್.ಯೋಗೇಶ್‌ನನ್ನು ತಾತ್ಕಾಲಿಕವಾಗಿ ಮತ್ತು ಮುಂದಿನ ಆದೇಶದವರೆಗೆ ಗ್ರಾಮ ಸಹಾಯಕ ಹುದ್ದೆಯ ಕರ್ತವ್ಯದಿಂದ ಬಿಡುಗಡೆಗೊಳಿಸಿರುತ್ತಾರೆ. ಸರ್ಕಾರಿ ದಾಖಲೆಗಳನ್ನು ಸಂರಕ್ಷಿಸಬೇಕಾದ ನಾಗಮಂಗಲ ತಾಲ್ಲೂಕು ತಹಸಿಲ್ದಾರ್, ಅಧೀನ ಸಿಬ್ಬಂದಿಗೆ ಅಕ್ರಮವಾಗಿ ದಾಖಲೆಗಳನ್ನು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿ ಕರ್ತವ್ಯ ಲೋಪವೆಸಗಿರುವ ಹಿನ್ನಲೆಯಲ್ಲಿ ತಹಸಿಲ್ದಾರ್ ಅವರಿಗೆ ಕಾರಣ ಕೇಳಿ ಜಿಲ್ಲಾಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ.

ಮತ್ತೊಬ್ಬನ ಬಂಧನ
ನಕಲಿ ದಾಖಲೆ ಸೃಷ್ಟಿ ಸಿ ಭೂಮಿ ಕಬಳಿಸಿರುವ ಪ್ರಕರಣಕ್ಕೆ ಸಂಬಂಽಸಿದಂತೆ ನಾಗಮಂಗಲ ಪಟ್ಟಣ ಪೋಲಿಸರು ಮತ್ತೊಬ್ಬ ಆರೋಪಿ ಬಂಧಿಸಿದ್ದಾರೆ. ವಿಜಯಕುಮಾರ್ ಬಂಧಿತ ಆರೋಪಿಯಾಗಿದ್ದು, ಈತ ತಹಸಿಲ್ದಾರ್ ಕಚೇರಿಯಲ್ಲಿ ಎಲ್.ಎನ್.ಡಿ ಶಾಖೆಯಲ್ಲಿ ಕರ್ತವ್ಯನಿರ್ವಹಿಸುತ್ತಿದ್ದ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

2 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

2 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

2 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

2 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

2 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

2 hours ago