ಮಂಡ್ಯ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರದಲ್ಲಿ ಸರ್ಕಾರ ಹಿಂದೆ ಸರಿಯಬಾರದು: ವೇಣುಗೋಪಾಲ್‌ ಆಗ್ರಹ

ಮಂಡ್ಯ : ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಬಗ್ಗೆ ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರದಿಂದ ಹಿಂದೆ ಸರಿಯಬಾರದು ಎಂದು ಮೈಶುಗರ್ ಕಬ್ಬು ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಸ್.ಎಂ.ವೇಣುಗೋಪಾಲ್ ಆಗ್ರಹ ಮಾಡಿದರು.

ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿರುವ ತೀರ್ಮಾನದಿಂದ ಕನ್ನಡಿಗರಿಗೆ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ತೆಗೆದುಕೊಂಡಿರುವ ನಿರ್ಣಯದಿಂದ ಹಿಂದೆ ಸರಿಯಬಾರದು ಎಂದು ಶನಿವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹ ಪಡಿಸಿದರು.

ದಶಕಗಳಿಂದ ಖಾಸಗಿ ವಲಯದ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಸಿಗಬೇಕು ಎನ್ನುವುದು ನಮ್ಮ ಬೇಡಿಕೆಯಾಗಿದೆ. ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರು ಖಾಸಗಿ ಉದ್ಯಮಗಳಲ್ಲಿ ಸಿ ಮತ್ತು ಡಿ ವಲಯಗಳಲ್ಲಿ ಶೇಕಡ 70ರಷ್ಟು ಹಾಗೂ ಎ ಮತ್ತು ಬಿ ಹುದ್ದೆಗಳಿಗೆ ಶೇಕಡ 50 ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ತೀರ್ಮಾನ ಸಮಂಜಸವಾಗಿದೆ ಎಂದರು.

ಆದರೆ ಕಾರಣಾಂತರಗಳಿಂದ ಈ ತೀರ್ಮಾನದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿರುವುದು ಕಂಡುಬಂದಿದ್ದು, ಹಾಗಾಗಿ ಯಾವುದೇ ಕಾರಣಕ್ಕೂ ಈ ದಿಟ್ಟ ಕ್ರಮದಿಂದ ಸರ್ಕಾರ ಹಿಂದೆ ಸರಿಯಬಾರದು ಎಂದು ಒತ್ತಾಯಿಸಿದರು.

ನಮ್ಮ ನೆಲ, ನಮ್ಮ ಜಲ ಬಳಕೆ ಮಾಡಿಕೊಂಡು ಕೆಲಸ ನೀಡುವ ವಿಚಾರದಲ್ಲಿ ವಿರೋಧ ವ್ಯಕ್ತ ಪಡಿಸುತ್ತಿರುವುದು ಸರಿಯಲ್ಲ. ಕನ್ನಡಿಗರಿಗೆ ಸಿಗುವ ಸೌಲಭ್ಯವನ್ನು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಕಾರ್ಯರೂಪಕ್ಕೆ ತರಬೇಕು ಎಂದು ತಾಕೀತು ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಎಸ್ ಕೃಷ್ಣ, ಶಿವಲಿಂಗಯ್ಯ ,ಎಂ ಸಿ ರಮೇಶ್, ಮಂಜು ಸೇರಿದಂತೆ ಇತರರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

2 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

2 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago