Government's order to investigate the Kasapa scam
ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಆರ್ಥಿಕ ಅಶಿಸ್ತು ಹಾಗೂ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ ಎಂದು ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಡಾ.ಮೀರಾ ಶಿವಲಿಂಗಯ್ಯ ಅಸಮಾಧಾನ ಹೊರಹಾಕಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಆರ್ಥಿಕ ಅಶಿಸ್ತು ಹಾಗೂ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಇದು ಎಲ್ಲರಿಗೂ ಬೇಸರವಾಗಿದೆ. ಇದನ್ನು ಸರ್ಕಾರದ ಗಮನಕ್ಕೂ ಕೂಡ ತಂದಿದ್ದೇವೆ. ಕಳೆದ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಸಂಭ್ರಮದಿಂದ ಆಚರಿಸಿದ್ದೇವೆ. ಏನೂ ಕಾರಣ ಕೊಡದೇ ಸಾಹಿತ್ಯ ಪರಿಷತ್ತಿನ ಎಲ್ಲಾ ಜಿಲ್ಲಾ ಕಾರ್ಯಕಾರಿ ಮಂಡಳಿ ಸದಸ್ಯರನ್ನು ವಜಾಗೊಳಿಸಿದ್ದು, ಮನಸ್ಸಿಗೆ ನೋವು ತಂದಿದೆ. ಅವರ ಮೇಲಿರುವ ಆರ್ಥಿಕ ಅಶಿಸ್ತಿನ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಿದ್ದೇವು.
ಸರ್ಕಾರ ನಮ್ಮ ಮನವಿಗೆ ಸ್ಪಂದಿಸಿ ಸರಿಯಾದ ದಿಕ್ಕಿನಲ್ಲಿ ವಿಚಾರಣೆ ನಡೆಸಲು ಆದೇಶಿಸಿದೆ. ಜೊತೆಗೆ ಬೈಲಾಗಳ ತಿದ್ದುಪಡಿಗಳಲ್ಲೂ ಕೂಡ ರಾಜ್ಯಾದ್ಯಂತ ಹೋರಾಟ ಮಾಡಿದ್ದೇವೆ. ಬೈಲಾದಲ್ಲಿ ಮಹೇಶ್ ಜೋಶಿ ಅವರು ಸರ್ವಾಧಿಕಾರಿ ಧೋರಣೆ ತೋರುತ್ತಿದ್ದರು. ಉಳಿಕೆಯಾದ ದುಡ್ಡನ್ನು ಆಯಾಯ ಜಿಲ್ಲೆಗಳಲ್ಲಿ ಕನ್ನಡ ಭವನ ಮಾಡುವ ಬದಲು ನಮಗೆ ಕೊಡಬೇಕು ಎಂದು ಬೈಲಾ ತಿದ್ದುಪಡಿ ತಂದಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಅವರ ವಿರುದ್ಧ ವಿಚಾರಣೆ ನಡೆಸಲು ಅನುಮತಿ ನೀಡಿರುವುದು ಸರಿಯಾದ ಕ್ರಮ ಎಂದರು.
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…
ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…