ಮಂಡ್ಯ

ಸರ್ಕಾರಿ ಸೇವೆಗಳು ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಚಾಲನೆ :ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ: ಸರ್ಕಾರದ ಸೇವೆಗಳು ಜನರಿಗೆ ಸಮರ್ಪಕವಾಗಿ ನಿಗದಿತ ಸಮಯಕ್ಕೆ ಜನರ ಮನೆ ಬಾಗಿಲಿಗೆ ದೊರೆಯುವಂತೆ ಮಾಡಬೇಕು ಎಂಬ ಉದ್ದೇಶದಿಂದ ಸರ್ಕಾರಿ ಯೋಜನೆಗಳು ಮನೆ ಬಾಗಿಲಿಗೆ ಎಂಬ ಕಾರ್ಯಕ್ರಮವನ್ನು ಹಮ್ನಿಕೊಳ್ಳಲಾಗಿದ್ದು, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮದವರು ಇದರ ಉಪಯೋಗವನ್ನು ಪಡೆದುಕೊಳ್ಳಿ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಹೇಳಿದರು.

ಅವರು ಇಂದು(ಜೂ.13) ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಕೆನ್ನಾಳು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಸೇವೆಗಳು ನಿಮ್ಮ ಮನೆ ಬಾಗಿಲಿಗೆ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಎಂಬ ವಿನೂತನ ಕಾರ್ಯಕ್ರಮವು ನನ್ನ ಕನಸಿನ ಕೂಗು ಎಂದು ಹೇಳಿದರೆ ತಪ್ಪಾಗಲಾರದು ಏಕಂದರೆ ಜನರು ಸರ್ಕಾರಿ ಕಚೇರಿ ತಾಲ್ಲೂಕು ಪಂಚಾಯಿತಿ ಗಳಲ್ಲಿ ಅಲೆಯುತ್ತಿರುವುದನ್ನು ನಾನು ನೋಡಿದ್ದೇನೆ, ನನ್ನ ಕ್ಷೇತ್ರದ ಜನರು ಇನ್ನೂ ಮುಂದೆ ಯಾವುದೇ ಕಚೇರಿ ಗಳಿಗೆ ಅಲೆಯುವುದು ಬೇಡ ಎಂದು ಸ್ವತಃ ನಾನೇ ಗ್ರಾಮಸ್ಥರ ಬಳಿ ತೆರಳುತ್ತಿದ್ದೇನೆ ಎಂದರು.

ಕೆನ್ನಾಳು ಗ್ರಾಮದಲ್ಲಿ ಸರ್ಕಾರಿ ಸೇವೆಗಳು ನಿಮ್ಮ ಮನೆ ಬಾಗಿಲಿಗೆ ಎಂಬ ಒಂದು ಚಿಕ್ಕ ಪ್ರಯತ್ನವನ್ನು ಇಂದಿನಿಂದ 15 ದಿನಗಳ ವರೆಗೆ  ಹಮ್ಮಿಕೊಂಡಿದ್ದೇನೆ ಇದಕ್ಕೆ ಜನಗಳ ಸಹಕಾರ ಬಹಳ ಮುಖ್ಯ ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಹೇಳಿದರು.

ಗ್ರಾಮದ ಜನರು ತಾಲ್ಲೂಕು ಕಛೇರಿ ಗಳಿಗೆ ಅಲೆಯಬಾರದು ಕುಂದು ಕೊರತೆಗಳು, ಸಮಸ್ಯೆಗಳು ಇದ್ದಲ್ಲಿ ಇದೇ ಗ್ರಾಮದಲ್ಲಿ ಈ 15 ದಿನಗಳಲ್ಲಿ ಪರಿಹರಿಸಲು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ದಿನನಿತ್ಯ ಜನರು ನಮ್ಮ ಹತ್ತಿರ ಬರುವದಾಗಲೀ ಅಥವಾ ಸರ್ಕಾರಿ ಅಧಿಕಾರಿಗಳ ಹತ್ತಿರ ಹೋಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾ ಅದೇ ನೋವಿನಲ್ಲಿ ಬಳಲುತ್ತಿದ್ದರು ಇದಕ್ಕೆ ಏನಾದರೂ ಪರಿಹಾರ ಹುಡುಕಬೇಕು ಎಂದು ಜಿಲ್ಲಾಧಿಕಾರಿಗಳ ಹತ್ತಿರ ಅನುಮತಿ ಪಡೆದು ಈ ಕಾರ್ಯಕ್ರಮ ಆಯೋಜನೆ ಮಾಡಿದ್ದೇನೆ ಎಂದರು.

ಪ್ರತಿ ಮನೆಗಳಿಗೆ ಹಾಗೂ ಊರುಗಳಿಗೆ ಸಿಗುವಂತಹ ಸವಲತ್ತುಗಳನ್ನು ಪಟ್ಟಿ ಮಾಡಿಕೊಂಡು ಒದಗಿಸಬೇಕು, ಯಾರು ಕೂಡ ಸರ್ಕಾರದ ಯೋಜನೆಗಳಿಂದ ವಂಚಿತರಾಗಬಾರದು, ಈ ವಿನೂತನ ಕಾರ್ಯಕ್ರಮದಲ್ಲಿ ಪ್ರತಿ ದಿನ ಸಂಜೆ 4 ರಿಂದ 6 ಗಂಟೆವರೆಗೆ ಜನರಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದೇವೆ ಎಂದರು.

ಬಾಲ್ಯವಿವಾಹ, ಬಾಲ್ಯ ಕಾರ್ಮಿಕ ಪದ್ಧತಿ ಮುಂತಾದ ಸಾಮಾಜಿಕ ಪಿಡುಗನ್ನು ತೊಡೆದುಹಾಕಲು, ಕಸ ವಿಲೇವಾರಿ, ಹಣ ಉಳಿತಾಯ ಮುಂತಾದ ಸಾರ್ವಜನಿಕ ಉಪಯುಕ್ತ ಕೆಲಸಗಳ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಸಹ ಈ ಕಾರ್ಯಕ್ರಮದಲ್ಲಿ ನಡೆಸಲಾಗುವುದು ಎಂದರು.

ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಾರ್ವಜನಿಕರು ನೇರವಾಗಿ ಸಂಪರ್ಕಿಸಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ನಂದೀಶ್, ತಹಶೀಲ್ದಾರ್ ಶ್ರೇಯಸ್, ಕಾರ್ಯನಿರ್ವಾಹಕ ಅಧಿಕಾರಿ ಲೋಕೇಶ್ ಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ಗ್ರಾಮಾಡಳಿತ ಅಧಿಕಾರಿ ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

10 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

12 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

12 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

13 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

13 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

15 hours ago