ಮಂಡ್ಯ

ಗೌಡಗೆರೆ ಚಾಮುಂಡೇಶ್ವರಿ ವಿಗ್ರಹ: ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌, ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಗೌರವ

ಚನ್ನಪಟ್ಟಣ: ತಾಲ್ಲೂಕಿನ ಗೌಡಗೆರೆಯ 60 ಅಡಿ ಎತ್ತರದ ಚಾಮುಂಡೇಶ್ವರಿ ಪಂಚಲೋಹ ವಿಗ್ರಹಕ್ಕೆ ಎತ್ತರದ ಪಂಚಲೋಹ ವಿಗ್ರಹ ಎಂದು ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಹಾಗೂ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಗೌರವ ಲಭಿಸಿದೆ.

ಈ ವಿಗ್ರಹವನ್ನು 2021ರಲ್ಲಿ ಗೌಡಗೆರೆ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದು, ಚಿನ್ನ, ಬೆಳ್ಳಿ, ಹಿತ್ತಾಳೆ, ಕಂಚು ಹಾಗೂ ತಾಮ್ರ ಬಳಸಿ 18 ಭುಜಗಳ ಸಿಂಹಾವರೂಢ ಪಂಚಲೋಹದ ವಿಗ್ರಹವಾಗಿದೆ. ಇದು ಸುಮಾರು 35 ಕೆ.ಜಿ. ಟನ್‌ ತೂಕವಿದ್ದು, ಗೌಡಗೆರೆ ಚಾಮುಂಡೇಶ್ವರಿಗೆ ಎತ್ತರದ ವಿಗ್ರಹ ಗರಿ ಸಿಕ್ಕಿದೆ.

ಇನ್ನೂ ಗೌಡಗೆರೆಯಲ್ಲಿ ಭಾನುವಾರ(ಜನವರಿ.26) ನಡೆದ ಕಾರ್ಯಕ್ರಮದಲ್ಲಿ ಏಷ್ಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಹಾಗೂ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ ಮುಖ್ಯಸ್ಥ ಸಾಗರ್‌ ಅವರು ಕ್ಷೇತ್ರದ ಧರ್ಮದರ್ಶಿ ಮಲ್ಲೇಶ್‌ ಗುರೂಜಿ ಅವರಿಗೆ ಪ್ರಮಾಣಪತ್ರ ಹಸ್ತಾಂತರಿಸಿದ್ದಾರೆ.

ಇದೇ ಸಂದರ್ಭದಲ್ಲಿ ನಿವೃತ್ತ ಪೊಲೀಸ್‌ ಅಧಿಕಾರಿ ರಾಮಕೃಷ್ಣಪ್ಪ, ಬಾಬು, ಸಗಾಯಿರಾಜು, ಸಂಘಟಕ ಸಂಜೀವ ರೆಡ್ಡಿ ಹಾಗೂ ಮಾಗನೂರು ಗಂಗರಾಜು ಉಪಸ್ಥಿತರಿದ್ದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

37 mins ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

43 mins ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

52 mins ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

1 hour ago