ಮಂಡ್ಯ

ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಚೆಲುವರಾಯಸ್ವಾಮಿ

ಮದ್ದೂರು: ಬಡವರ ಹೇಳಿಗೆಗಾಗಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ವಿರೋಧ ಪಕ್ಷದವರ ಮಾತಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವ ಎನ್‌.ಚೆಲುವರಾಯಸ್ವಾಮಿ ಹೇಳಿದರು.

ಇಂದು (ಫೆ.23) ಕೊಪ್ಪ ಕೆರೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪ ಹೋಬಳಿಯ ಸಮಗ್ರ ಅಭಿವೃದ್ದಿಗೆ ಶ್ರಮಿಸಲಾಗುವುದದು. ಕೊಪ್ಪದಲ್ಲಿ ನಾಡ ಕಚೇರಿ ನಿರ್ಮಾಣ, ಪೊಲೀಸ್‌ ಠಾಣೆಗೆ ಹೊಸ ಕಟ್ಟಡ ನಿರ್ಮಾಣ, ಪ್ರಾಥಾಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡುವುದು ಸೇರಿದಂತೆ ಅಭಿವೃದ್ದಿ ಕಾಮಗಾರಿಗಳನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ತಿಳಿಸಿದರು.

ಕೊಪ್ಪ ಕೆರೆಯ ನಾಲೆಗಳ ನಿರ್ಮಾಣಕ್ಕೆ ನೀರಾವರಿ ಇಲಾಖೆಗೆ ಸುಮಾರು 100 ಕೋಟಿ ರೂ. ಹಣ ಬಿಡುಗಡೆಗೊಳಿಸಲಾಗುವುದು. ಎನ್‌.ಎಸ್‌.ಎಲ್‌. ಸಕ್ಕರೆ ಕಾರ್ಖಾನೆಯಿಂದ ಕೊಪ್ಪದವರೆಗೆ ಜೋಡಿ ರಸ್ತೆ ನಿರ್ಮಾಣ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದರು.

ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳಿಗೆ 2 ತಿಂಗಳಿಂದ ಹಣ ನೀಡಿರದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಗೃಹಲಕ್ಷ್ಮೀ ಯೋಜನೆಯಡಿ ಆದಷ್ಟು ಬೇಗ ಹಣ ಖಾತೆಗಳಿಗೆ ಜಮೆಯಾಗಲಿದೆ ಎಂದರು.

ವಿಶ್ವವಿದ್ಯಾಲಯಗಳ ವಿಲೀನ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳನ್ನು ವಿಲೀನ ಮಾಡುವಂತೆ ಯಾರು ಹೇಳಿಲ್ಲ. ಆದರೆ, ಶಿಕ್ಷಣ ತಜ್ಞರು ವಿಲೀನ ಮಾಡಿದರೆ ಒಳ್ಳೆಯದು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಮಾಡಲಿದೆ ಎಂದರು.

ನಾಗಮಂಗಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಎನ್‌. ದಿವಾಕರ್‌, ತಾ.ಪಂ.ಉಪಾಧ್ಯಕ್ಷರಾದ ಬೆಕ್ಕಳಲೆ ರಘು, ರಾಮಚಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.

 

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

4 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

8 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

9 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

9 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

9 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

10 hours ago