ಮದ್ದೂರು: ಬಡವರ ಹೇಳಿಗೆಗಾಗಿ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ವಿರೋಧ ಪಕ್ಷದವರ ಮಾತಿಗೆ ಕಿವಿಗೊಡಬಾರದು ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದರು.
ಇಂದು (ಫೆ.23) ಕೊಪ್ಪ ಕೆರೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಪ್ಪ ಹೋಬಳಿಯ ಸಮಗ್ರ ಅಭಿವೃದ್ದಿಗೆ ಶ್ರಮಿಸಲಾಗುವುದದು. ಕೊಪ್ಪದಲ್ಲಿ ನಾಡ ಕಚೇರಿ ನಿರ್ಮಾಣ, ಪೊಲೀಸ್ ಠಾಣೆಗೆ ಹೊಸ ಕಟ್ಟಡ ನಿರ್ಮಾಣ, ಪ್ರಾಥಾಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡುವುದು ಸೇರಿದಂತೆ ಅಭಿವೃದ್ದಿ ಕಾಮಗಾರಿಗಳನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ತಿಳಿಸಿದರು.
ಕೊಪ್ಪ ಕೆರೆಯ ನಾಲೆಗಳ ನಿರ್ಮಾಣಕ್ಕೆ ನೀರಾವರಿ ಇಲಾಖೆಗೆ ಸುಮಾರು 100 ಕೋಟಿ ರೂ. ಹಣ ಬಿಡುಗಡೆಗೊಳಿಸಲಾಗುವುದು. ಎನ್.ಎಸ್.ಎಲ್. ಸಕ್ಕರೆ ಕಾರ್ಖಾನೆಯಿಂದ ಕೊಪ್ಪದವರೆಗೆ ಜೋಡಿ ರಸ್ತೆ ನಿರ್ಮಾಣ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದರು.
ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳಿಗೆ 2 ತಿಂಗಳಿಂದ ಹಣ ನೀಡಿರದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಗೃಹಲಕ್ಷ್ಮೀ ಯೋಜನೆಯಡಿ ಆದಷ್ಟು ಬೇಗ ಹಣ ಖಾತೆಗಳಿಗೆ ಜಮೆಯಾಗಲಿದೆ ಎಂದರು.
ವಿಶ್ವವಿದ್ಯಾಲಯಗಳ ವಿಲೀನ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳನ್ನು ವಿಲೀನ ಮಾಡುವಂತೆ ಯಾರು ಹೇಳಿಲ್ಲ. ಆದರೆ, ಶಿಕ್ಷಣ ತಜ್ಞರು ವಿಲೀನ ಮಾಡಿದರೆ ಒಳ್ಳೆಯದು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಮಾಡಲಿದೆ ಎಂದರು.
ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ದಿವಾಕರ್, ತಾ.ಪಂ.ಉಪಾಧ್ಯಕ್ಷರಾದ ಬೆಕ್ಕಳಲೆ ರಘು, ರಾಮಚಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…