ಮಂಡ್ಯ

ಬೆಳ್ಳಂಬೆಳ್ಳಗ್ಗೆ ಗುಂಡಿನ ಸದ್ದು: ರೌಡಿಶೀಟರ್ ಬಂಧನ

ಮಂಡ್ಯ : ಪೋಲಿಸ್ ಕಾರ್ಯಾಚರಣೆ ವೇಳೆ ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿ ನಟೋರಿಯಸ್ ರೌಡಿಶೀಟರ್ ನನ್ನ ಬಂಧಿಸಿರುವ ಘಟನೆ ಭಾನುವಾರ ಬೆಳ್ಳಂ ಬೆಳಿಗ್ಗೆ ನಡೆದಿದೆ.

ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಬಳಿ ರೌಡಿಶೀಟರ್ ಮುತ್ತುರಾಜ್ ಅಲಿಯಾಸ್ ಡಕ್ಕನ ಮೇಲೆ ಹಲಗೂರು ವೃತ್ತದ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್ ಫೈರಿಂಗ್ ಮಾಡಿ ಬಂಧಿಸಿದ್ದಾರೆ.

ಕೊಲೆ, ಕೊಲೆಯತ್ನ ಹಾಗೂ ರೌಡಿ ಚಟುವಟಿಕೆಗಳು ಸೇರಿದಂತೆ ಐದಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮುತ್ತುರಾಜ್ ಅಲಿಯಾಸ್ ಡಕ್ಕನನ್ನು ಖಚಿತ ಮಾಹಿತಿ ಮೇರೆಗೆ ಭಾನುವಾರ ಬೆಳ್ಳಂಬೆಳಿಗ್ಗೆ ಬಂಧಿಸಲು ಹೋದಾಗ ಪೊಲೀಸ್ ಸಿಬ್ಬಂದಿ ಸಿದ್ದರಾಜು ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ.

ಮೊದಲು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದ್ದಾರೆ, ಆದರೂ ಸಹ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾದಾಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಆರೋಪಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಹಲಗೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ: ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಲೈ 30 ರಂದು ಕಾಂತರಾಜು ಎಂಬಾತನ ಕೊಲೆ ನಡೆದಿತ್ತು. ಆ ಸಂಬಂಧ ಕೊಲೆ ಪ್ರಕರಣ ದಾಖಲಾಗಿತ್ತು. ಸಿಪಿವೈ ಶ್ರೀಧ‌ರ್ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನ ಆರಂಭಿಸಿದ್ದರು. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿತ್ತು.

ತನಿಖೆ ವೇಳೆ ಕಾಂತರಾಜು ಕೊಲೆಗೆ ಮುತ್ತುರಾಜ ಅಲಿಯಾಸ್ ಡಕ್ಕ ಸುಫಾರಿ ನೀಡಿರುವ ಬಗ್ಗೆ ಆರೋಪಿಗಳು ಬಾಯ್ದಿಟ್ಟಿದ್ದರು. ಡಕ್ಕ ಅಲಿಯಾಸ್ ಮುತ್ತುರಾಜ್ ಸೂಚನೆ ಮೇಲೆ ಕೊಲೆ ನಡೆಸಿರುವುದಾಗಿ ಆರೋಪಿಗಳ ತಪ್ಪೊಪ್ಪಿಕೊಂಡಿದ್ದರು.ಆ ಹಿನ್ನೆಲೆಯಲ್ಲಿ ಈತನ ಬಂಧನಕ್ಕೆ ಪೊಲೀಸರು ಶೋಧ ಕೈಗೊಂಡಿದ್ದರು

ಮುತ್ತುರಾಜ್ ಅಲಿಯಾಸ್ ಡಕ್ಕ 11 ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. 3 ಕೊಲೆ, 3 ಕೊಲೆಗೆ ಯತ್ನ, 2 ರಾಬರಿ ಪ್ರಕರಣ ಸೇರಿ ಹಲವು ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇನ್ನಷ್ಟು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಆರೋಪಿ ಡಕ್ಕ ಹಲವು ಹುಡುಗರ ಗುಂಪು ಕಟ್ಟಿಕೊಂಡು ಅಪರಾಧ ಚಟುವಟಿಕೆಯಲ್ಲಿ ಸಕ್ರಿಯನಾಗಿದ್ದ. 2019 ರಿಂದ ರೌಡಿ ಚಟುವಟಿಕೆ ಯಲ್ಲಿದ್ದು ಇಸ್ವೀಟ್ ಜೂಜಾಟ ದಂಧೆಗೂ ಇಳಿದಿದ್ದನು ಇದೀಗ ಪೊಲೀಸರು ಈತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago