ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ಸ್ವಾಮೀಜಿಗಳು ಅವರದ್ದೇ ಆದ ಕಲ್ಪನೆಗಳನ್ನು ಹೊಂದಿದ್ದಾರೆ. ಇಂತಹ ಸ್ವಾಮೀಜಿಗಳು ಇಲ್ಲಿಗೆ ಬರಬಾರದು. ಅವರಿಗೆ ಅಗೌರವ ಆಗಬಾರದು ಎಂಬ ದೃಷ್ಟಿಯಿಂದ ಅವರನ್ನು ಬಳಕೆ ಮಾಡಿಕೊಳ್ಳಬಾರದು ಎಂದಿದ್ದೆ. ನಮ್ಮ ಹಾಗೂ ದೊಡ್ಡ ಸ್ವಾಮೀಜಿಗಳ ಸಂಬಂಧ ಹಲವರಿಗೆ ಗೊತ್ತಿಲ್ಲ. ಬಾಲಗಂಗಾಧರನಾಥ ಸ್ವಾಮೀಜಿಗಳು ಸಮಾಜದ ಗೌರವ ಉಳಿಸಲು ಬೀದಿಗೆ ಬಂಧವರು. ಅವರಿಗೆ ದೇವೇಗೌಡರು ಸಿಎಂ ಆಗಲಿ ಎನ್ನುವುದು ಮನಸ್ಸಿನಲ್ಲಿತ್ತು. ನನ್ನನ್ನು ಕಂಡರೂ ಅವರಿಗೆ ತುಂಬಾ ಇಷ್ಟವಿತ್ತು. ನನ್ನಿಂದ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಪಚಾರ ಆಗಿದ್ದರೆ ಸಾರ್ವಜನಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.
ಇನ್ನು ಪ್ರಸಕ್ತ ರಾಜಕೀಯ ವಿದ್ಯಮಾನಗಳು ಏನು ನಡೆಯುತ್ತಿವೆ ಎಂದು ಎಲ್ಲರಿಗೂ ಗೊತ್ತು. ಈ ಬಗ್ಗೆ ನಮ್ಮ ನಿರ್ಮಲಾನಂದನಾಥ ಶ್ರೀಗಳು ಮಾತನಾಡಿದ್ದಾರೆ. ಅವರು ಮಾತಾಡಿದ್ದಕ್ಕೆ ಇನ್ಯಾರೋ ಮಾತಾಡಿದ್ದಾರೆ. ನಮ್ಮ ಸ್ವಾಮೀಜಿಯಷ್ಟು ಶಿಕ್ಷಣ ಹೊಂದಿರುವವರು ದೇಶದ ಇತಿಹಾಸದಲ್ಲಿ ಮತ್ತೊಬ್ಬರು ಯಾರೂ ಇಲ್ಲ ಎಂದು ಹೇಳಿದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…