ಮಂಡ್ಯ: ಕೇಂದ್ರ ಸಚಿವರಾದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಸಕ್ಕರೆ ನಾಡು ಮಂಡ್ಯದಲ್ಲಿ ಗದ್ದೆಗಿಳಿದು ಭತ್ತ ನಾಟಿ ಮಾಡಲಿದ್ದಾರೆ.
ರೈತ ನಾಯಕ ಎನಿಸಿಕೊಂಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇದೇ ಆಗಸ್ಟ್.11ರಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸೀತಾಪುರ ಜಮೀನೊಂದರಲ್ಲಿ ಭತ್ತ ನಾಟಿ ಮಾಡಲಿದ್ದಾರೆ.
ಎಚ್ಡಿಕೆ ಭತ್ತ ನಾಟಿ ಮಾಡಲಿರುವ ಹಿನ್ನೆಲೆಯಲ್ಲಿ ಇಂದು ನಿಖಿಲ್ ಕುಮಾರಸ್ವಾಮಿ ಅವರು ಸೀತಾಪುರ ಜಮೀನಿಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ.
ಆಗಸ್ಟ್.11ಕ್ಕೆ ಮಂಡ್ಯಗೆ ಭೇಟಿ ನೀಡಲಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಮೊದಲಿಗೆ ಕಾವೇರಿ ನದಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಪೂಜೆ ಬಳಿಕ ಸೀತಾಪುರಕ್ಕೆ ತೆರಳಿ ಭತ್ತ ನಾಟಿ ಮಾಡಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಇನ್ನೂ ಕಳೆದ 2018ರಲ್ಲಿ ಸಿಎಂ ಆಗಿದ್ದಾಗಲೂ ಕುಮಾರಸ್ವಾಮಿ ಅವರು ಗದ್ದೆಗಿಳಿದು ನಾಟಿ ಮಾಡಿದ್ದರು. ಇದೀಗ ಕೇಂದ್ರ ಸಚಿವರಾದ ಬಳಿಕ ಮತ್ತೆ ಗದ್ದೆಯಲ್ಲಿ ಭತ್ತ ನಾಟಿ ಮಾಡಲಿದ್ದು, ರೈತ ನಾಯಕ ಎಂಬುದನ್ನು ಮತ್ತೆ ಮತ್ತೆ ಸಾಬೀತು ಪಡಿಸುತ್ತಿದ್ದಾರೆ.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…