ಮಂಡ್ಯ

ಕೆಂಪೇಗೌಡರು ಕಟ್ಟಿದ ಕೆರೆಗಳನ್ನೆಲ್ಲಾ ಹಣದ ದಾಹಕ್ಕೆ ನುಂಗಿದ್ದಾರೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಭೂಮಿಯ ಹಣ ದಾಹದಿಂದ ಬಡಾವಣೆಯ ಹೆಸರಿನಲ್ಲಿ ಕೆರೆ, ಕಾಲುವೆಗಳನ್ನು ಮುಚ್ಚಿದ್ದಾರೆ. ಅಲ್ಲದೇ, ರಾಜರು ನಿರ್ಮಿಸಿದ್ದ ರಾಜ ಕಾಲುವೆಗಳನ್ನೂ ಸಹ ಉಳಿಸಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಪ್ರಸ್ತುತ ದಿನಗಳಲ್ಲಿ ಮಳೆ ಬಂದಾಗ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಾರ್ವಜನಿಕರು ಕಷ್ಟ ಪಡುವಂತಾಗಿದೆ. ನನ್ನ ಬಗ್ಗೆ ಮಾತನಾಡುವವರು ಇದರ ಬಗ್ಗೆ ಸ್ವಲ್ಪ ತಿಳಿದುಕೊಳ್ಳಬೇಕು ಎಂದು ಪರೋಕ್ಷವಾಗಿ ಟಾಂಗ್‌ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

14 mins ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

32 mins ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

43 mins ago

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

59 mins ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

1 hour ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

2 hours ago