hdk
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿದ್ದು, ಕೂಡಲೇ ರಾಜ್ಯ ಸರಕಾರ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಮಂಡ್ಯದ ಲೋಕಸಭೆ ಸದಸ್ಯರೂ ಆಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು, ಜನಾಭಿಪ್ರಾಯ ಪರಿಗಣಿಸದೆ ಏಕಪಕ್ಷೀಯವಾಗಿ ಸಂಪುಟ ಸಭೆಯಲ್ಲಿ ಕೂಡ ಈ ಪಂಚಾಯಿತಿಗಳನ್ನು ಮದ್ದೂರು ನಗರಸಭೆಗೆ ಸೇರಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೇಳಿದ್ದೇನೆ. ಸರಕಾರ ಜನತೆಯ ನಿಲುವುಗಳಿಗೆ ವಿರುದ್ಧವಾಗಿ ಹೋಗಬಾರರದು. ಈ ಹಿನ್ನೆಲೆಯಲ್ಲಿ ತಾವು ಮಧ್ಯಪ್ರವೇಶ ಮಾಡಿ ಇದಕ್ಕೆ ತಡೆಯೊಡ್ಡಬೇಕು ಎಂದು ಕೋರಿದ್ದಾರೆ.
ಈ ಎಲ್ಲಾ ಪಂಚಾಯಿತಿಗಳ ಗ್ರಾಮಸ್ಥರು ಹಾಗೂ ಪಂಚಾಯಿತಿಗಳ ಸದಸ್ಯರು, ರೈತ ಮುಖಂಡರಾದ ಸುನಂದಾ ಜಯರಾಂ ಅವರು ಸೇರಿದಂತೆ ಅನೇಕರು ಈ ಬಗ್ಗೆ ಮನವಿ ಮಾಡಿದ್ದು, ಇವರೆಲ್ಲರೂ 70 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ನಾನು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಅವರ ಬೇಡಿಕೆಗಳನ್ನು ಆಲಿಸಿದ್ದೇನೆ ಎಂದು ಕೇಂದ್ರ ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಸುನಂದಾ ಜಯರಾಮ್ ಅವರು ತಮಗೆ ನೀಡಿದ್ದ ಮನವಿ ಪತ್ರವನ್ನು ಲಗತ್ತಿಸಿದ್ದಾರೆ.
ಯಾವುದೇ ಕಾರಣಕ್ಕೂ ಮದ್ದೂರು ನಗರಸಭೆ ವ್ಯಾಪ್ತಿಗೆ ಈ ಗ್ರಾಮಗಳನ್ನು ಸೇರಿಸಬಾರದು. ಕೂಡಲೇ ಈ ಜನವಿರೋಧಿ ನಿರ್ಧಾರವನ್ನು ಹಿಂಪಡೆಯಬೇಕೆಂದು ಒಕ್ಕೂರಲ ಒತ್ತಾಯ ಮಾಡಿರುತ್ತಾರೆ. ಸ್ಥಳೀಯರ ಮನವಿಗೆ ಮನ್ನಣೆ ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯವಾಗಿದೆ. ಅಲ್ಲದೆ, ಜನತೆಯ ನಿರ್ಧಾರಕ್ಕೆ ವಿರುದ್ಧವಾಗಿ ಸರಕಾರ ನಡೆದುಕೊಳ್ಳುವುದು ಸರಿಯಲ್ಲ ಎಂದು ಸಚಿವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…