ಮಂಡ್ಯ

ಕಾವೇರಿಗಾಗಿ ರೈತರ ಅರೆಬೆತ್ತಲೆ ಮೆರವಣಿಗೆ

ಶ್ರೀರಂಗಪಟ್ಟಣ : ರೈತರ ಜೀವನಾಡಿ ಕೃಷ್ಣರಾಜ ಸಾಗರದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರು ಶ್ರೀರಂಗಪಟ್ಟಣದಲ್ಲಿ ಅರೆಬೆತ್ತಲೆ ಮೆರವಣಿಗೆ ನಡೆಸಿ, ಪ್ರತಿಭಟಿಸಿದರು.
ಭೂಮಿತಾಯಿ ಹೋರಾಟ ಸಮಿತಿ ಸಹಯೋಗದಲ್ಲಿ ರೈತರು ಪಟ್ಟಣದ ಸ್ನಾನಘಟ್ಟದ ಬಳಿಯ ಕಾವೇರಿ ನದಿಗಿಳಿದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಅರೆ ಬೆತ್ತಲೆ ಮೆರವಣಿಗೆ ಹೊರಟ ಪ್ರತಿಭಟನಾಕಾರರು ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮನ್ನಣೆ ನೀಡಿ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಟ್ಟಿರುವ ಸರ್ಕಾರ ಕೆ ಆರ್ ಎಸ್ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹರಿಸುತ್ತಿದೆ.ಕೂಡಲೆ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಜಲಾಶಯದಲ್ಲಿ ಇರುವ ನೀರು ಬರಿದು ಮಾಡುವ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ. ರೈತರ ಬೆಳೆಗೆ ನೀರಿಲ್ಲ ಎಂದು ರೈತರು ಪರಿತಪಿಸುತ್ತಿದ್ದರೂ ಬೆಳೆ ರಕ್ಷಣೆಗೆ ನೀರು ನೀಡದೆ ನೆರೆ ರಾಜ್ಯಕ್ಕೆ ಹರಿಸಿ ಜಲಾಶಯದಲ್ಲಿ ನೀರನ್ನು ನೂರು ಅಡಿಗೆ ತಂದು ನಿಲ್ಲಿಸಿದೆ. ಇದೇ ರೀತಿ ನೀರು ಹರಿಸುತ್ತಿದ್ದರೆ ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯಲು ನೀರು ಸಹ ಸಿಗದಂತೆ ಮಾಡಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಕೃಷ್ಣೇಗೌಡ, ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್. ನಂಜುಂಡೇಗೌಡ, ಹನಿಯಂಬಾಡಿ ನಾಗರಾಜು ಇತರರು ಧರಣಿಯಲ್ಲಿ ಭಾಗವಹಿಸಿದ್ದರು.

lokesh

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

6 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

7 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

7 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

7 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

8 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

8 hours ago