ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳ ಬೃಹತ್ ಸಂಕೀರ್ತನಾ ಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ಕೇಸರಿ ಬಂಟಿಂಗ್ಸ್ ಮತ್ತು ಫ್ಲೆಕ್ಸ್ಗಳು ರಾರಾಜಿಸುತ್ತಿವೆ.
ಸಂಕೀರ್ತನಾ ಯಾತ್ರೆ ಸಾಗುವ ಪಟ್ಟಣದ ಮುಖ್ಯ ಬೀದಿಗೆ ಕೇಸರಿ ಬಂಟಿಂಗ್ಸ್ ಹಾಕಿ ಅಲಂಕಾರ ಮಾಡಲಾಗಿದೆ.
ಈ ಸಂಕೀರ್ತನಾ ಯಾತ್ರೆಯಲ್ಲಿ ಐದು ಸಾವಿರಕ್ಕೂ ಹೆಚ್ಚು ಮಾಲಾಧಾರಿಗಳು ಭಾಗಿಯಾಗಲಿದ್ದಾರೆ.
ಇನನು ಪಟ್ಟಣದ ವಿವಾದಿತ ಜಾಮಿಯಾ ಮಸೀದಿ ಮೇಲೆ ಮಾಲಾಧಾರಿಗಳು ಕಣ್ಣಿದ್ದು, ವಿವಾದಿತ ಮಸೀದಿ ಜಾಗ ಮೂಡಲ ಬಾಗಿಲು ಆಂಜನೇಯನ ಮೂಲ ದೇಗುಲ ಸ್ಥಾನ ಅನ್ನೋದು ಹನುಮ ಭಕ್ತರ ವಾದವಾಗಿದೆ.
ಈ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ ಎರಡು ದಶಕಗಳಿಂದ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ನಡೆಸಲಾಗುತ್ತಿದೆ.
ಗಂಜಾಂನ ಹನುಮ ದೇವಾಲಯದಿಂದ ರಂಗನಾಥ ದೇಗುಲದವರೆಗೂ ಈ ಸಂಕೀರ್ತನಾ ಯಾತ್ರೆ ನಡೆಯಲಿದೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಂಕೀರ್ತನಾ ಯಾತ್ರೆಗೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಪೊಲೀಸ್ ಇಲಾಖೆಯು ಸಹ ಹನುಮ ಮಾಲಾಧಾರಿಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…