ಮಂಡ್ಯ: ಬೈಕ್ ಸ್ಕಿಡ್ ಆದ ಪರಿಣಾಮ ಮೂವರು ಹನುಮ ಮಾಲಾಧಾರಿಗಳಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ಶೆಟ್ಟಿಹಳ್ಳಿ ಬಳಿ ಈ ಘಟನೆ ನಡೆದಿದ್ದು, ಸಂಕೀರ್ತನಾ ಯಾತ್ರೆಗೆ ಆಗಮಿಸುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಈ ಅವಘಡ ಸಂಭವಿಸಿದೆ.
ಒಂದೇ ಬೈಕ್ನಲ್ಲಿ ಮೂವರು ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಶ್ರೀರಂಗಪಟ್ಟಣದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂದ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿದ್ದು, ನಿಮಿಷಾಂಬಾ ದೇವಸ್ಥಾನದಿಂದ ಆರಂಭವಾದ ಯಾತ್ರೆ ಜಾಮೀಯಾ ಮಸೀದಿ ಮುಂಭಾಗದಿಂದ ರಂಗನಾಥಸ್ವಾಮಿ ದೇವಸ್ಥಾನದವರೆಗೆ ನಡೆಯಲಿದೆ. ಶ್ರೀರಂಗಪಟ್ಟಣ ಸಂಪೂರ್ಣ ಕೇಸರಿ ಮಯವಾಗಿದ್ದು ಎಲ್ಲೆಲ್ಲೂ ಹನುಮಧ್ವಜ ರಾರಾಜಿಸುತ್ತಿದೆ.
ಆದರೆ ಈ ಸಂಭ್ರಮದ ವೇಳೆ ಈ ಘಟನೆ ನಡೆದಿರುವುದು ಹನುಮ ಮಾಲಾಧಾರಿಗಳಿಗೆ ಕೊಂಚ ಬೇಸರ ತರಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…