ಮಂಡ್ಯ

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ ಬೆಂಕಿ‌ ಕಾಣಿಸಿಕೊಂಡು ಧಗಧಗಿಸಿದ ಘಟನೆ ನಡೆದಿದೆ.

ಸುದ್ದಿ ತಿಳಿಯುತ್ತಿದ್ದಂತೆ ವಲಯ ಅರಣ್ಯಾಧಿಕಾರಿ ಸುಂದರ ಅವರ ನೇತೃತ್ವದಲ್ಲಿ ಬೆಂಕಿ ಬಿದ್ದಿದ್ದ ಸ್ಥಳಕ್ಕೆ ಭಾವಿಸಿ ಹಲವು ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಎಸಿಎಫ್ ಮರಿಸ್ವಾಮಿ ಮಾತನಾಡಿ ಅಲಗುಮೂಲೆ ಮುಂಬೆಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿಚ್ಚಿದ ವಿಚಾರ ತಿಳಿಯುತ್ತಿದ್ದಂತೆ ನಮ್ಮ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಬೆಂಕಿಯು ಆಕಸ್ಮಿಕವಾಗಿ ಬಿದ್ದಿದೆಯೋ ಅಥವಾ ಯಾರಾದರೂ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೋ ಎಂಬುದನ್ನು ಪತ್ತೆಹಚ್ಚಬೇಕಿದೆ ಎಂದು ತಿಳಿಸಿದರು.

ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಬೆಂಕಿ ಹರಡಿ ಹೊತ್ತಿ ಉರಿಯುತ್ತಿದ್ದ ಮಾಹಿತಿ ಅರಿತು ಕಾವೇರಿ ವನ್ಯಜೀವಿಧಾಮದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದರು. ಬೇಸಿಗೆ ಸಮಯದಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿದ್ದ ಬೆಂಕಿ ಪ್ರಕರಣಗಳು ಡಿಸೆಂಬರ್ ನಲ್ಲೆ ಉಂಟಾಗಿರುವುದು ಪರಿಸರ ಪ್ರೇಮಿಗಳ ಆತಂಕಕ್ಕೆ ಕಾರಣವಾಗಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

20 mins ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

2 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

2 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

2 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

2 hours ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

2 hours ago