ಮಂಡ್ಯ

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ ಬೆಂಕಿ‌ ಕಾಣಿಸಿಕೊಂಡು ಧಗಧಗಿಸಿದ ಘಟನೆ ನಡೆದಿದೆ.

ಸುದ್ದಿ ತಿಳಿಯುತ್ತಿದ್ದಂತೆ ವಲಯ ಅರಣ್ಯಾಧಿಕಾರಿ ಸುಂದರ ಅವರ ನೇತೃತ್ವದಲ್ಲಿ ಬೆಂಕಿ ಬಿದ್ದಿದ್ದ ಸ್ಥಳಕ್ಕೆ ಭಾವಿಸಿ ಹಲವು ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಕುರಿತು ಎಸಿಎಫ್ ಮರಿಸ್ವಾಮಿ ಮಾತನಾಡಿ ಅಲಗುಮೂಲೆ ಮುಂಬೆಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿಚ್ಚಿದ ವಿಚಾರ ತಿಳಿಯುತ್ತಿದ್ದಂತೆ ನಮ್ಮ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಬೆಂಕಿಯು ಆಕಸ್ಮಿಕವಾಗಿ ಬಿದ್ದಿದೆಯೋ ಅಥವಾ ಯಾರಾದರೂ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೋ ಎಂಬುದನ್ನು ಪತ್ತೆಹಚ್ಚಬೇಕಿದೆ ಎಂದು ತಿಳಿಸಿದರು.

ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಬೆಂಕಿ ಹರಡಿ ಹೊತ್ತಿ ಉರಿಯುತ್ತಿದ್ದ ಮಾಹಿತಿ ಅರಿತು ಕಾವೇರಿ ವನ್ಯಜೀವಿಧಾಮದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದರು. ಬೇಸಿಗೆ ಸಮಯದಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿದ್ದ ಬೆಂಕಿ ಪ್ರಕರಣಗಳು ಡಿಸೆಂಬರ್ ನಲ್ಲೆ ಉಂಟಾಗಿರುವುದು ಪರಿಸರ ಪ್ರೇಮಿಗಳ ಆತಂಕಕ್ಕೆ ಕಾರಣವಾಗಿದೆ.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

2 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

5 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

5 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

5 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

6 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

7 hours ago