ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ ಬೆಂಕಿ ಕಾಣಿಸಿಕೊಂಡು ಧಗಧಗಿಸಿದ ಘಟನೆ ನಡೆದಿದೆ.
ಸುದ್ದಿ ತಿಳಿಯುತ್ತಿದ್ದಂತೆ ವಲಯ ಅರಣ್ಯಾಧಿಕಾರಿ ಸುಂದರ ಅವರ ನೇತೃತ್ವದಲ್ಲಿ ಬೆಂಕಿ ಬಿದ್ದಿದ್ದ ಸ್ಥಳಕ್ಕೆ ಭಾವಿಸಿ ಹಲವು ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಎಸಿಎಫ್ ಮರಿಸ್ವಾಮಿ ಮಾತನಾಡಿ ಅಲಗುಮೂಲೆ ಮುಂಬೆಟ್ಟ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿಚ್ಚಿದ ವಿಚಾರ ತಿಳಿಯುತ್ತಿದ್ದಂತೆ ನಮ್ಮ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಬೆಂಕಿಯು ಆಕಸ್ಮಿಕವಾಗಿ ಬಿದ್ದಿದೆಯೋ ಅಥವಾ ಯಾರಾದರೂ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೋ ಎಂಬುದನ್ನು ಪತ್ತೆಹಚ್ಚಬೇಕಿದೆ ಎಂದು ತಿಳಿಸಿದರು.
ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಬೆಂಕಿ ಹರಡಿ ಹೊತ್ತಿ ಉರಿಯುತ್ತಿದ್ದ ಮಾಹಿತಿ ಅರಿತು ಕಾವೇರಿ ವನ್ಯಜೀವಿಧಾಮದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದರು. ಬೇಸಿಗೆ ಸಮಯದಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿದ್ದ ಬೆಂಕಿ ಪ್ರಕರಣಗಳು ಡಿಸೆಂಬರ್ ನಲ್ಲೆ ಉಂಟಾಗಿರುವುದು ಪರಿಸರ ಪ್ರೇಮಿಗಳ ಆತಂಕಕ್ಕೆ ಕಾರಣವಾಗಿದೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…