ಮಂಡ್ಯ

ಎಚ್‌.ಡಿ ಕುಮಾರಸ್ವಾಮಿ ದಂಪತಿ ಕೋಟ್ಯಾಂತರ ರೂಪಾಯಿ ಆಸ್ತಿಗೆ ಅಧಿಪತಿ!

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಇಂದು(ಏಪ್ರಿಲ್‌ 4) ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಕುಮಾರಸ್ವಾಮಿ ಉಮೇದುವಾರಿಕೆಯ ಅಫಿಡೆವಿಟ್‌ನಲ್ಲಿ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದು, ಬರೋಬ್ಬರಿ 217.21 ಕೋಟಿ ರೂಪಾಯಿ ಒಡೆಯರಾಗಿದ್ದಾರೆ.

ಹೌದು. ಕುಟುಂಬದ ಒಟ್ಟು ಚರಾಸ್ತಿ 102.23 ಕೋಟಿ ರೂ ಹಾಗೂ ಕುಟುಂಬದ ಒಟ್ಟು ಸ್ಥಿರಾಸ್ತಿ 102.23 ಕೋಟಿ ರೂ ಹಾಗೂ ಕುಟುಂಬದ ಒಟ್ಟು ಸ್ಥಿರಾಸ್ತಿ 114.98 ಕೋಟಿ ರೂ. ಒಟ್ಟು 217.21 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ವಿಶೇಷ ಅಂದರೆ ಕಳೆದ ವರ್ಷಕ್ಕಿಂತ ಎಚ್‌ಡಿ ಕುಮಾರಸ್ವಾಮಿ ಆಸ್ತಿ ಮೌಲ್ಯ 50.7 ಕೋಟಿ ರೂ. ಹೆಚ್ಚಳವಾಗಿದೆ.

ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಬಳಿ ಚಿನ್ನ ಬೆಳ್ಳಿ ಮತ್ತು ವಜ್ರಾಭರಣಗಳು ಸಹ ಇವೆ. 47 ಲಕ್ಷ ರೂ. ಮೌಲ್ಯದ 750 ಗ್ರಾಂ ಚಿನ್ನಾಭರಣ, 9.62 ಲಕ್ಷ ರೂಪಾಯಿ ಮೌಲ್ಯದ 12.5ಕೆಜಿ ಬೆಳ್ಳಿ ಮತ್ತು 2.60 ಲಕ್ಷ ರೂ. ಮೌಲ್ಯದ 4 ಕ್ಯಾರೆಟ್ ವಜ್ರ ಹೊಂದಿರುವುದಾಗಿ ತಮ್ಮ ಅಫಿಡೆವಿಟ್​ನಲ್ಲಿ ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ. ಇನ್ನು ಪತ್ನಿ ಅನಿತಾ ಕುಮಾರಸ್ವಾಮಿ ಬಳಿ ಸಹ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಜ್ರ ಇವೆ. 2.41ಕೋಟಿ ರೂ. ಮೌಲ್ಯದ 3.8ಕೆಜಿ ಚಿನ್ನಾಭರಣ, 13 ಲಕ್ಷ ರೂ. ಮೌಲ್ಯದ 17 ಕೆಜಿ ಬೆಳ್ಳಿ ಮತ್ತು 33 ಲಕ್ಷ ರೂ. ಮೌಲ್ಯದ 50 ಕ್ಯಾರೆಟ್ ಡೈಮಂಡ್ ಹೊಂದಿದ್ದಾರೆ.

ಕುಮಾರಸ್ವಾಮಿ ಹೆಸರಿನಲ್ಲಿ ಚರಾಸ್ತಿ ಮೌಲ್ಯ 10,71,26,254 ರೂ. ಇದ್ದರೆ, ಪತ್ನಿ ಅನಿತಾ ಹೆಸರಿನಲ್ಲಿ ಚರಾಸ್ತಿ ಮೌಲ್ಯ 90,32,28,973 ರೂ. ಇದೆ. ಇನ್ನು ಕುಮಾರಸ್ವಾಮಿಯ ಸ್ಥಿರಾಸ್ತಿ ಮೌಲ್ಯ 43,94,42100 ರೂ. ಇದ್ದರೆ, ಪತ್ನಿ ಅನಿತಾ ಹೆಸರಿನಲ್ಲಿ 64,07,73,530 ರೂ. ಸ್ಥಿರಾಸ್ತಿ ಇದೆ. ಇನ್ನು ಹಿಂದು ಅವಿಭಕ್ತ ಕುಟುಂಬದ ಚರಾಸ್ತಿ ಆಸ್ತಿ 1.20ಕೋಟಿ ರೂ, ಹಿಂದೂ ಅವಿಭಕ್ತ ಕುಟುಂಬದ ಸ್ಥಿರಾಸ್ತಿ 6.97 ರೂ. ಇರುವುದಾಗಿ ತಿಳಿಸಿದ್ದಾರೆ.

ಇನ್ನು ಲೋಕಾಯುಕ್ತ, ಕ್ರಿಮಿನಲ್, ಸಿವಿಲ್ ಪ್ರಕರಣ ಎದುರಿಸುತ್ತಿರುವ ಕುಮಾರಸ್ವಾಮಿ, 3 ಪ್ರಕರಣಗಳು ಲೋಕಾಯುಕ್ತದಲ್ಲಿ ವಿಚಾರಣೆ ಹಂತದಲ್ಲಿವೆ ಎಂದು ತಮ್ಮ ಅಫಿಡೆವಿಟ್​ನಲ್ಲಿ ಉಲ್ಲೇಖಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

9 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

10 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

10 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

10 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

10 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

10 hours ago