ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಇಂದು(ಏಪ್ರಿಲ್ 4) ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಕುಮಾರಸ್ವಾಮಿ ಉಮೇದುವಾರಿಕೆಯ ಅಫಿಡೆವಿಟ್ನಲ್ಲಿ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದು, ಬರೋಬ್ಬರಿ 217.21 ಕೋಟಿ ರೂಪಾಯಿ ಒಡೆಯರಾಗಿದ್ದಾರೆ.
ಹೌದು. ಕುಟುಂಬದ ಒಟ್ಟು ಚರಾಸ್ತಿ 102.23 ಕೋಟಿ ರೂ ಹಾಗೂ ಕುಟುಂಬದ ಒಟ್ಟು ಸ್ಥಿರಾಸ್ತಿ 102.23 ಕೋಟಿ ರೂ ಹಾಗೂ ಕುಟುಂಬದ ಒಟ್ಟು ಸ್ಥಿರಾಸ್ತಿ 114.98 ಕೋಟಿ ರೂ. ಒಟ್ಟು 217.21 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ವಿಶೇಷ ಅಂದರೆ ಕಳೆದ ವರ್ಷಕ್ಕಿಂತ ಎಚ್ಡಿ ಕುಮಾರಸ್ವಾಮಿ ಆಸ್ತಿ ಮೌಲ್ಯ 50.7 ಕೋಟಿ ರೂ. ಹೆಚ್ಚಳವಾಗಿದೆ.
ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಬಳಿ ಚಿನ್ನ ಬೆಳ್ಳಿ ಮತ್ತು ವಜ್ರಾಭರಣಗಳು ಸಹ ಇವೆ. 47 ಲಕ್ಷ ರೂ. ಮೌಲ್ಯದ 750 ಗ್ರಾಂ ಚಿನ್ನಾಭರಣ, 9.62 ಲಕ್ಷ ರೂಪಾಯಿ ಮೌಲ್ಯದ 12.5ಕೆಜಿ ಬೆಳ್ಳಿ ಮತ್ತು 2.60 ಲಕ್ಷ ರೂ. ಮೌಲ್ಯದ 4 ಕ್ಯಾರೆಟ್ ವಜ್ರ ಹೊಂದಿರುವುದಾಗಿ ತಮ್ಮ ಅಫಿಡೆವಿಟ್ನಲ್ಲಿ ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ. ಇನ್ನು ಪತ್ನಿ ಅನಿತಾ ಕುಮಾರಸ್ವಾಮಿ ಬಳಿ ಸಹ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಜ್ರ ಇವೆ. 2.41ಕೋಟಿ ರೂ. ಮೌಲ್ಯದ 3.8ಕೆಜಿ ಚಿನ್ನಾಭರಣ, 13 ಲಕ್ಷ ರೂ. ಮೌಲ್ಯದ 17 ಕೆಜಿ ಬೆಳ್ಳಿ ಮತ್ತು 33 ಲಕ್ಷ ರೂ. ಮೌಲ್ಯದ 50 ಕ್ಯಾರೆಟ್ ಡೈಮಂಡ್ ಹೊಂದಿದ್ದಾರೆ.
ಕುಮಾರಸ್ವಾಮಿ ಹೆಸರಿನಲ್ಲಿ ಚರಾಸ್ತಿ ಮೌಲ್ಯ 10,71,26,254 ರೂ. ಇದ್ದರೆ, ಪತ್ನಿ ಅನಿತಾ ಹೆಸರಿನಲ್ಲಿ ಚರಾಸ್ತಿ ಮೌಲ್ಯ 90,32,28,973 ರೂ. ಇದೆ. ಇನ್ನು ಕುಮಾರಸ್ವಾಮಿಯ ಸ್ಥಿರಾಸ್ತಿ ಮೌಲ್ಯ 43,94,42100 ರೂ. ಇದ್ದರೆ, ಪತ್ನಿ ಅನಿತಾ ಹೆಸರಿನಲ್ಲಿ 64,07,73,530 ರೂ. ಸ್ಥಿರಾಸ್ತಿ ಇದೆ. ಇನ್ನು ಹಿಂದು ಅವಿಭಕ್ತ ಕುಟುಂಬದ ಚರಾಸ್ತಿ ಆಸ್ತಿ 1.20ಕೋಟಿ ರೂ, ಹಿಂದೂ ಅವಿಭಕ್ತ ಕುಟುಂಬದ ಸ್ಥಿರಾಸ್ತಿ 6.97 ರೂ. ಇರುವುದಾಗಿ ತಿಳಿಸಿದ್ದಾರೆ.
ಇನ್ನು ಲೋಕಾಯುಕ್ತ, ಕ್ರಿಮಿನಲ್, ಸಿವಿಲ್ ಪ್ರಕರಣ ಎದುರಿಸುತ್ತಿರುವ ಕುಮಾರಸ್ವಾಮಿ, 3 ಪ್ರಕರಣಗಳು ಲೋಕಾಯುಕ್ತದಲ್ಲಿ ವಿಚಾರಣೆ ಹಂತದಲ್ಲಿವೆ ಎಂದು ತಮ್ಮ ಅಫಿಡೆವಿಟ್ನಲ್ಲಿ ಉಲ್ಲೇಖಿಸಿದ್ದಾರೆ.
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…