ಮಂಡ್ಯ

ಎಚ್‌.ಡಿ ಕುಮಾರಸ್ವಾಮಿ ದಂಪತಿ ಕೋಟ್ಯಾಂತರ ರೂಪಾಯಿ ಆಸ್ತಿಗೆ ಅಧಿಪತಿ!

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಇಂದು(ಏಪ್ರಿಲ್‌ 4) ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಕುಮಾರಸ್ವಾಮಿ ಉಮೇದುವಾರಿಕೆಯ ಅಫಿಡೆವಿಟ್‌ನಲ್ಲಿ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದು, ಬರೋಬ್ಬರಿ 217.21 ಕೋಟಿ ರೂಪಾಯಿ ಒಡೆಯರಾಗಿದ್ದಾರೆ.

ಹೌದು. ಕುಟುಂಬದ ಒಟ್ಟು ಚರಾಸ್ತಿ 102.23 ಕೋಟಿ ರೂ ಹಾಗೂ ಕುಟುಂಬದ ಒಟ್ಟು ಸ್ಥಿರಾಸ್ತಿ 102.23 ಕೋಟಿ ರೂ ಹಾಗೂ ಕುಟುಂಬದ ಒಟ್ಟು ಸ್ಥಿರಾಸ್ತಿ 114.98 ಕೋಟಿ ರೂ. ಒಟ್ಟು 217.21 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ವಿಶೇಷ ಅಂದರೆ ಕಳೆದ ವರ್ಷಕ್ಕಿಂತ ಎಚ್‌ಡಿ ಕುಮಾರಸ್ವಾಮಿ ಆಸ್ತಿ ಮೌಲ್ಯ 50.7 ಕೋಟಿ ರೂ. ಹೆಚ್ಚಳವಾಗಿದೆ.

ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಬಳಿ ಚಿನ್ನ ಬೆಳ್ಳಿ ಮತ್ತು ವಜ್ರಾಭರಣಗಳು ಸಹ ಇವೆ. 47 ಲಕ್ಷ ರೂ. ಮೌಲ್ಯದ 750 ಗ್ರಾಂ ಚಿನ್ನಾಭರಣ, 9.62 ಲಕ್ಷ ರೂಪಾಯಿ ಮೌಲ್ಯದ 12.5ಕೆಜಿ ಬೆಳ್ಳಿ ಮತ್ತು 2.60 ಲಕ್ಷ ರೂ. ಮೌಲ್ಯದ 4 ಕ್ಯಾರೆಟ್ ವಜ್ರ ಹೊಂದಿರುವುದಾಗಿ ತಮ್ಮ ಅಫಿಡೆವಿಟ್​ನಲ್ಲಿ ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ. ಇನ್ನು ಪತ್ನಿ ಅನಿತಾ ಕುಮಾರಸ್ವಾಮಿ ಬಳಿ ಸಹ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಜ್ರ ಇವೆ. 2.41ಕೋಟಿ ರೂ. ಮೌಲ್ಯದ 3.8ಕೆಜಿ ಚಿನ್ನಾಭರಣ, 13 ಲಕ್ಷ ರೂ. ಮೌಲ್ಯದ 17 ಕೆಜಿ ಬೆಳ್ಳಿ ಮತ್ತು 33 ಲಕ್ಷ ರೂ. ಮೌಲ್ಯದ 50 ಕ್ಯಾರೆಟ್ ಡೈಮಂಡ್ ಹೊಂದಿದ್ದಾರೆ.

ಕುಮಾರಸ್ವಾಮಿ ಹೆಸರಿನಲ್ಲಿ ಚರಾಸ್ತಿ ಮೌಲ್ಯ 10,71,26,254 ರೂ. ಇದ್ದರೆ, ಪತ್ನಿ ಅನಿತಾ ಹೆಸರಿನಲ್ಲಿ ಚರಾಸ್ತಿ ಮೌಲ್ಯ 90,32,28,973 ರೂ. ಇದೆ. ಇನ್ನು ಕುಮಾರಸ್ವಾಮಿಯ ಸ್ಥಿರಾಸ್ತಿ ಮೌಲ್ಯ 43,94,42100 ರೂ. ಇದ್ದರೆ, ಪತ್ನಿ ಅನಿತಾ ಹೆಸರಿನಲ್ಲಿ 64,07,73,530 ರೂ. ಸ್ಥಿರಾಸ್ತಿ ಇದೆ. ಇನ್ನು ಹಿಂದು ಅವಿಭಕ್ತ ಕುಟುಂಬದ ಚರಾಸ್ತಿ ಆಸ್ತಿ 1.20ಕೋಟಿ ರೂ, ಹಿಂದೂ ಅವಿಭಕ್ತ ಕುಟುಂಬದ ಸ್ಥಿರಾಸ್ತಿ 6.97 ರೂ. ಇರುವುದಾಗಿ ತಿಳಿಸಿದ್ದಾರೆ.

ಇನ್ನು ಲೋಕಾಯುಕ್ತ, ಕ್ರಿಮಿನಲ್, ಸಿವಿಲ್ ಪ್ರಕರಣ ಎದುರಿಸುತ್ತಿರುವ ಕುಮಾರಸ್ವಾಮಿ, 3 ಪ್ರಕರಣಗಳು ಲೋಕಾಯುಕ್ತದಲ್ಲಿ ವಿಚಾರಣೆ ಹಂತದಲ್ಲಿವೆ ಎಂದು ತಮ್ಮ ಅಫಿಡೆವಿಟ್​ನಲ್ಲಿ ಉಲ್ಲೇಖಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

16 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

16 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

16 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

16 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

16 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

16 hours ago