ಮಂಡ್ಯ

ರಾಜೀನಾಮೆಗೆ ಆಗ್ರಹಿಸಿದ್ದ ಕಾಂಗ್ರೆಸ್‌ ವಿರುದ್ಧ ಎಚ್‌ಡಿಕೆ ಗರಂ

ಮಂಡ್ಯ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಡಿನೋಟಿಫಿಕೇಶನ್‌ ಹಗರಣದ ಕುರಿತು ಕಾಂಗ್ರೆಸ್‌ ಸಚಿವರು ರಾಜೀನಾಮೆ ಆಗ್ರಹಿಸಿದ್ದರು. ಇದೀಗ ಈ ವಿಚಾರ ಕುರಿತು ಎಚ್‌ಡಿಕೆ ತಿರುಗೇಟು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಕಸಲಗೆರೆ ಗ್ರಾಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಡಿನೋಟಿಫಿಕೇಶನ್‌ ಕೇಸ್‌ಗೂ ನನಗೂ ಏನು ಸಂಬಂಧ? ಇಂಗ್ಲೀಷ್‌ ಓದೋಕೆ ಬರುತ್ತೋ ಅಥವಾ ಕನ್ನಡ ಓದೋಕೆ ಬರುತ್ತೋ ಎಂದು ಕಾಂಗ್ರೆಸ್‌ ಸಚಿವರಿಗೆ ಮೊದಲು ಕೇಳಿ. ಅನಂತರ ಅವರೆಲ್ಲರೂ ಕುಳಿತುಕೊಂಡು ಆ ಪೇಪರ್‌ನಲ್ಲಿ ಏನಿದೆ ಎಂಬುದನ್ನು ಸರಿಯಾಗಿ ಓದಲಿ ಎಂದರು.

ಮುಡಾ ಹಗರಣಕ್ಕೂ ನಮಗೂ ಸಂಬಂಧ ಇಲ್ಲ. ನಾನು ಏನು ತಪ್ಪು ಮಾಡಿಲ್ಲ. ಬೇಕಿದ್ದರೆ ತನಿಖೆ ನಡೆಸಲಿ, ಅವರು ಸರಿಯಾಗಿ ದಾಖಲೆಗಳನ್ನು ನೋಡಿಲ್ಲವೆಂದು ಕಾಣುತ್ತದೆ. ಯಾರೋ ಏನೋ ಬರೆದು ಕೊಟ್ಟಿದ್ದಾರೆ ಅದನ್ನು ತಂದು ಇಲ್ಲಿ ತುತ್ತೂರಿ ಊದುತ್ತಿದ್ದಾರೆ. ಹೀಗಿರುವಾಗ ನನ್ನ ರಾಜೀನಾಮೆ ಕೇಳಲು ಕಾಂಗ್ರೆಸ್‌ ನಾಯಕರೇನೂ ಹುಚ್ಚರಾ? ಅವರು ಕೇಳಿದಾಕ್ಷಣ ನಾನೇಕೆ ರಾಜೀನಾಮೆ ನೀಡಬೇಕು? ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

5 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

32 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago