ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಡಿನೋಟಿಫಿಕೇಶನ್ ಹಗರಣದ ಕುರಿತು ಕಾಂಗ್ರೆಸ್ ಸಚಿವರು ರಾಜೀನಾಮೆ ಆಗ್ರಹಿಸಿದ್ದರು. ಇದೀಗ ಈ ವಿಚಾರ ಕುರಿತು ಎಚ್ಡಿಕೆ ತಿರುಗೇಟು ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕಸಲಗೆರೆ ಗ್ರಾಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಡಿನೋಟಿಫಿಕೇಶನ್ ಕೇಸ್ಗೂ ನನಗೂ ಏನು ಸಂಬಂಧ? ಇಂಗ್ಲೀಷ್ ಓದೋಕೆ ಬರುತ್ತೋ ಅಥವಾ ಕನ್ನಡ ಓದೋಕೆ ಬರುತ್ತೋ ಎಂದು ಕಾಂಗ್ರೆಸ್ ಸಚಿವರಿಗೆ ಮೊದಲು ಕೇಳಿ. ಅನಂತರ ಅವರೆಲ್ಲರೂ ಕುಳಿತುಕೊಂಡು ಆ ಪೇಪರ್ನಲ್ಲಿ ಏನಿದೆ ಎಂಬುದನ್ನು ಸರಿಯಾಗಿ ಓದಲಿ ಎಂದರು.
ಮುಡಾ ಹಗರಣಕ್ಕೂ ನಮಗೂ ಸಂಬಂಧ ಇಲ್ಲ. ನಾನು ಏನು ತಪ್ಪು ಮಾಡಿಲ್ಲ. ಬೇಕಿದ್ದರೆ ತನಿಖೆ ನಡೆಸಲಿ, ಅವರು ಸರಿಯಾಗಿ ದಾಖಲೆಗಳನ್ನು ನೋಡಿಲ್ಲವೆಂದು ಕಾಣುತ್ತದೆ. ಯಾರೋ ಏನೋ ಬರೆದು ಕೊಟ್ಟಿದ್ದಾರೆ ಅದನ್ನು ತಂದು ಇಲ್ಲಿ ತುತ್ತೂರಿ ಊದುತ್ತಿದ್ದಾರೆ. ಹೀಗಿರುವಾಗ ನನ್ನ ರಾಜೀನಾಮೆ ಕೇಳಲು ಕಾಂಗ್ರೆಸ್ ನಾಯಕರೇನೂ ಹುಚ್ಚರಾ? ಅವರು ಕೇಳಿದಾಕ್ಷಣ ನಾನೇಕೆ ರಾಜೀನಾಮೆ ನೀಡಬೇಕು? ಎಂದು ವಾಗ್ದಾಳಿ ನಡೆಸಿದರು.
ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…
ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…
ನವೀನ್ ಡಿಸೋಜ ಶಿಪ್ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …
ನಂದಿನಿ ಎನ್. ಹತ್ತು ಜನರಿಗಾಗುವಷ್ಟು ಅಡುಗೆಗೆ ಕೇವಲ ೨ ಮೆಣಸಿನ ಕಾಯಿ ಸಾಕು ಎಂದರೆ ನಂಬುತ್ತೀರಾ!? ನಾಗಾಲ್ಯಾಂಡ್ ಪ್ರವಾಸದಲ್ಲಿ ಅಲ್ಲಿನ…
ತಾಜ್ ಗಡಿನಾಡು ಇರಾನ್ ಮೇಲೆ ಫೆಬ್ರವರಿ ಅಂತ್ಯಕ್ಕೆ ಆರಂಭಗೊಂಡ ಅಮೆರಿಕ-ಇಸ್ರೇಲ್ ದೇಶಗಳ ಜಂಟಿ ಯುದ್ಧ ತಿಂಗಳು ಕಳೆದರೂ ಇನ್ನೂ ಅಂತ್ಯಗೊಂಡಿಲ್ಲ.…
ಮಂಜು ಕೋಟೆ ಕೋಟೆ: ೧೦ ವರ್ಷಗಳಿಂದ ಬಳಕೆಗೆ ಬಾರದ ಕಟ್ಟಡ; ಮತ್ತೊಂದು ಕಾಮಗಾರಿಯೂ ನನೆಗುದಿಗೆ ಎಚ್.ಡಿ.ಕೋಟೆ: ಪಟ್ಟಣದ ಹೃದಯ ಭಾಗದಲ್ಲಿ…