ಮಂಡ್ಯ

ರಾಜೀನಾಮೆಗೆ ಆಗ್ರಹಿಸಿದ್ದ ಕಾಂಗ್ರೆಸ್‌ ವಿರುದ್ಧ ಎಚ್‌ಡಿಕೆ ಗರಂ

ಮಂಡ್ಯ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಡಿನೋಟಿಫಿಕೇಶನ್‌ ಹಗರಣದ ಕುರಿತು ಕಾಂಗ್ರೆಸ್‌ ಸಚಿವರು ರಾಜೀನಾಮೆ ಆಗ್ರಹಿಸಿದ್ದರು. ಇದೀಗ ಈ ವಿಚಾರ ಕುರಿತು ಎಚ್‌ಡಿಕೆ ತಿರುಗೇಟು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಕಸಲಗೆರೆ ಗ್ರಾಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಡಿನೋಟಿಫಿಕೇಶನ್‌ ಕೇಸ್‌ಗೂ ನನಗೂ ಏನು ಸಂಬಂಧ? ಇಂಗ್ಲೀಷ್‌ ಓದೋಕೆ ಬರುತ್ತೋ ಅಥವಾ ಕನ್ನಡ ಓದೋಕೆ ಬರುತ್ತೋ ಎಂದು ಕಾಂಗ್ರೆಸ್‌ ಸಚಿವರಿಗೆ ಮೊದಲು ಕೇಳಿ. ಅನಂತರ ಅವರೆಲ್ಲರೂ ಕುಳಿತುಕೊಂಡು ಆ ಪೇಪರ್‌ನಲ್ಲಿ ಏನಿದೆ ಎಂಬುದನ್ನು ಸರಿಯಾಗಿ ಓದಲಿ ಎಂದರು.

ಮುಡಾ ಹಗರಣಕ್ಕೂ ನಮಗೂ ಸಂಬಂಧ ಇಲ್ಲ. ನಾನು ಏನು ತಪ್ಪು ಮಾಡಿಲ್ಲ. ಬೇಕಿದ್ದರೆ ತನಿಖೆ ನಡೆಸಲಿ, ಅವರು ಸರಿಯಾಗಿ ದಾಖಲೆಗಳನ್ನು ನೋಡಿಲ್ಲವೆಂದು ಕಾಣುತ್ತದೆ. ಯಾರೋ ಏನೋ ಬರೆದು ಕೊಟ್ಟಿದ್ದಾರೆ ಅದನ್ನು ತಂದು ಇಲ್ಲಿ ತುತ್ತೂರಿ ಊದುತ್ತಿದ್ದಾರೆ. ಹೀಗಿರುವಾಗ ನನ್ನ ರಾಜೀನಾಮೆ ಕೇಳಲು ಕಾಂಗ್ರೆಸ್‌ ನಾಯಕರೇನೂ ಹುಚ್ಚರಾ? ಅವರು ಕೇಳಿದಾಕ್ಷಣ ನಾನೇಕೆ ರಾಜೀನಾಮೆ ನೀಡಬೇಕು? ಎಂದು ವಾಗ್ದಾಳಿ ನಡೆಸಿದರು.

ಅರ್ಚನ ಎಸ್‌ ಎಸ್

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

39 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

59 mins ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

2 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

4 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

4 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

5 hours ago