ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಡಿನೋಟಿಫಿಕೇಶನ್ ಹಗರಣದ ಕುರಿತು ಕಾಂಗ್ರೆಸ್ ಸಚಿವರು ರಾಜೀನಾಮೆ ಆಗ್ರಹಿಸಿದ್ದರು. ಇದೀಗ ಈ ವಿಚಾರ ಕುರಿತು ಎಚ್ಡಿಕೆ ತಿರುಗೇಟು ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕಸಲಗೆರೆ ಗ್ರಾಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಡಿನೋಟಿಫಿಕೇಶನ್ ಕೇಸ್ಗೂ ನನಗೂ ಏನು ಸಂಬಂಧ? ಇಂಗ್ಲೀಷ್ ಓದೋಕೆ ಬರುತ್ತೋ ಅಥವಾ ಕನ್ನಡ ಓದೋಕೆ ಬರುತ್ತೋ ಎಂದು ಕಾಂಗ್ರೆಸ್ ಸಚಿವರಿಗೆ ಮೊದಲು ಕೇಳಿ. ಅನಂತರ ಅವರೆಲ್ಲರೂ ಕುಳಿತುಕೊಂಡು ಆ ಪೇಪರ್ನಲ್ಲಿ ಏನಿದೆ ಎಂಬುದನ್ನು ಸರಿಯಾಗಿ ಓದಲಿ ಎಂದರು.
ಮುಡಾ ಹಗರಣಕ್ಕೂ ನಮಗೂ ಸಂಬಂಧ ಇಲ್ಲ. ನಾನು ಏನು ತಪ್ಪು ಮಾಡಿಲ್ಲ. ಬೇಕಿದ್ದರೆ ತನಿಖೆ ನಡೆಸಲಿ, ಅವರು ಸರಿಯಾಗಿ ದಾಖಲೆಗಳನ್ನು ನೋಡಿಲ್ಲವೆಂದು ಕಾಣುತ್ತದೆ. ಯಾರೋ ಏನೋ ಬರೆದು ಕೊಟ್ಟಿದ್ದಾರೆ ಅದನ್ನು ತಂದು ಇಲ್ಲಿ ತುತ್ತೂರಿ ಊದುತ್ತಿದ್ದಾರೆ. ಹೀಗಿರುವಾಗ ನನ್ನ ರಾಜೀನಾಮೆ ಕೇಳಲು ಕಾಂಗ್ರೆಸ್ ನಾಯಕರೇನೂ ಹುಚ್ಚರಾ? ಅವರು ಕೇಳಿದಾಕ್ಷಣ ನಾನೇಕೆ ರಾಜೀನಾಮೆ ನೀಡಬೇಕು? ಎಂದು ವಾಗ್ದಾಳಿ ನಡೆಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…