ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಡಿನೋಟಿಫಿಕೇಶನ್ ಹಗರಣದ ಕುರಿತು ಕಾಂಗ್ರೆಸ್ ಸಚಿವರು ರಾಜೀನಾಮೆ ಆಗ್ರಹಿಸಿದ್ದರು. ಇದೀಗ ಈ ವಿಚಾರ ಕುರಿತು ಎಚ್ಡಿಕೆ ತಿರುಗೇಟು ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕಸಲಗೆರೆ ಗ್ರಾಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಡಿನೋಟಿಫಿಕೇಶನ್ ಕೇಸ್ಗೂ ನನಗೂ ಏನು ಸಂಬಂಧ? ಇಂಗ್ಲೀಷ್ ಓದೋಕೆ ಬರುತ್ತೋ ಅಥವಾ ಕನ್ನಡ ಓದೋಕೆ ಬರುತ್ತೋ ಎಂದು ಕಾಂಗ್ರೆಸ್ ಸಚಿವರಿಗೆ ಮೊದಲು ಕೇಳಿ. ಅನಂತರ ಅವರೆಲ್ಲರೂ ಕುಳಿತುಕೊಂಡು ಆ ಪೇಪರ್ನಲ್ಲಿ ಏನಿದೆ ಎಂಬುದನ್ನು ಸರಿಯಾಗಿ ಓದಲಿ ಎಂದರು.
ಮುಡಾ ಹಗರಣಕ್ಕೂ ನಮಗೂ ಸಂಬಂಧ ಇಲ್ಲ. ನಾನು ಏನು ತಪ್ಪು ಮಾಡಿಲ್ಲ. ಬೇಕಿದ್ದರೆ ತನಿಖೆ ನಡೆಸಲಿ, ಅವರು ಸರಿಯಾಗಿ ದಾಖಲೆಗಳನ್ನು ನೋಡಿಲ್ಲವೆಂದು ಕಾಣುತ್ತದೆ. ಯಾರೋ ಏನೋ ಬರೆದು ಕೊಟ್ಟಿದ್ದಾರೆ ಅದನ್ನು ತಂದು ಇಲ್ಲಿ ತುತ್ತೂರಿ ಊದುತ್ತಿದ್ದಾರೆ. ಹೀಗಿರುವಾಗ ನನ್ನ ರಾಜೀನಾಮೆ ಕೇಳಲು ಕಾಂಗ್ರೆಸ್ ನಾಯಕರೇನೂ ಹುಚ್ಚರಾ? ಅವರು ಕೇಳಿದಾಕ್ಷಣ ನಾನೇಕೆ ರಾಜೀನಾಮೆ ನೀಡಬೇಕು? ಎಂದು ವಾಗ್ದಾಳಿ ನಡೆಸಿದರು.
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…