ಮೇಲುಕೋಟೆ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸಿ, ಬಹುಮತ ಸಾಧಿಸುವ ಮೂಲಕ ಕೇಂದ್ರ ಮಂತ್ರಿಯಾದ ಕಾರಣ ಅವರ ಅಭಿಮಾನಿಯೋರ್ವ ಮಂಡಿಯಿಂದ ಮೇಲುಕೋಟೆ ಮೆಟ್ಟಿಲು ಹತ್ತಿ ತಮ್ಮ ಹರಕೆ ತೀರಿಸಿದ್ದಾರೆ.
ಮಾಜಿ ಸಿಎಂ ಎಚ್ಡಿಕೆ ಕೇಂದ್ರ ಮಂತ್ರಿಯಾದರೆ ತಾವು ಮಂಡಿಯಿಂದ ಮೇಲುಕೊಟೆಯ 365 ಮೆಟ್ಟಿಲುಗಳನ್ನು ಹತ್ತುವ ಮೂಲಕ ಹರಕೆ ತೀರಿಸುವುದಾಗಿ ಲೋಕೇಶ್ ದೇವರಿಗೆ ಮೊರೆ ಹೋಗಿದ್ದರು. ಅದರಂತೆ ತಾವು ಮಂಡಿಯಿಂದ ಮೇಲುಕೋಟೆ ಹತ್ತಿ ತಮ್ಮ ಹರಕೆಯನ್ನು ಪೂರೈಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಚಿಕ್ಕಮಂಡ್ಯದ ಲೋಕೇಶ್, ತಾವು ಎಚ್ಡಿಕೆ ಆವರ ದೊಡ್ಡ ಅಭಿಮಾನಿಯಾಗಿದ್ದು, ಅವರು ಆರೋಗ್ಯದಲ್ಲಿ ಚೇತರಿಕೆ ಕಾಣಬೇಕು. ಕೇಂದ್ರದಲ್ಲಿ ಮಂತ್ರಿಸ್ಥಾನ ಗಳಿಸಬೇಕು ಎಂದು ಮೇಲುಕೋಟೆಯ ಯೋಗನರಸಿಂಹಸ್ವಾಮಿ ಗೆ ಹರಕೆ ಹೊತ್ತಿದ್ದೆ. ನನ್ನ ಬೇಡಿಕೆಯಂತೆ ಎಚ್ಡಿ ಕುಮಾರಸ್ವಾಮಿ ಅವರು ಮಂತ್ರಿಯಾಗಿದ್ದು, ನನ್ನ ಬೇಡಿಕೆ ಫಲಿಸಿದ್ದರಿಂದ ನನ್ನ ಹರಕೆಯನ್ನು ಪೂರ್ಣಗೊಳಿಸಿದ್ದೇನೆ ಎಂದು ಹೇಳಿದರು.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…