ಮೇಲುಕೋಟೆ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸಿ, ಬಹುಮತ ಸಾಧಿಸುವ ಮೂಲಕ ಕೇಂದ್ರ ಮಂತ್ರಿಯಾದ ಕಾರಣ ಅವರ ಅಭಿಮಾನಿಯೋರ್ವ ಮಂಡಿಯಿಂದ ಮೇಲುಕೋಟೆ ಮೆಟ್ಟಿಲು ಹತ್ತಿ ತಮ್ಮ ಹರಕೆ ತೀರಿಸಿದ್ದಾರೆ.
ಮಾಜಿ ಸಿಎಂ ಎಚ್ಡಿಕೆ ಕೇಂದ್ರ ಮಂತ್ರಿಯಾದರೆ ತಾವು ಮಂಡಿಯಿಂದ ಮೇಲುಕೊಟೆಯ 365 ಮೆಟ್ಟಿಲುಗಳನ್ನು ಹತ್ತುವ ಮೂಲಕ ಹರಕೆ ತೀರಿಸುವುದಾಗಿ ಲೋಕೇಶ್ ದೇವರಿಗೆ ಮೊರೆ ಹೋಗಿದ್ದರು. ಅದರಂತೆ ತಾವು ಮಂಡಿಯಿಂದ ಮೇಲುಕೋಟೆ ಹತ್ತಿ ತಮ್ಮ ಹರಕೆಯನ್ನು ಪೂರೈಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಚಿಕ್ಕಮಂಡ್ಯದ ಲೋಕೇಶ್, ತಾವು ಎಚ್ಡಿಕೆ ಆವರ ದೊಡ್ಡ ಅಭಿಮಾನಿಯಾಗಿದ್ದು, ಅವರು ಆರೋಗ್ಯದಲ್ಲಿ ಚೇತರಿಕೆ ಕಾಣಬೇಕು. ಕೇಂದ್ರದಲ್ಲಿ ಮಂತ್ರಿಸ್ಥಾನ ಗಳಿಸಬೇಕು ಎಂದು ಮೇಲುಕೋಟೆಯ ಯೋಗನರಸಿಂಹಸ್ವಾಮಿ ಗೆ ಹರಕೆ ಹೊತ್ತಿದ್ದೆ. ನನ್ನ ಬೇಡಿಕೆಯಂತೆ ಎಚ್ಡಿ ಕುಮಾರಸ್ವಾಮಿ ಅವರು ಮಂತ್ರಿಯಾಗಿದ್ದು, ನನ್ನ ಬೇಡಿಕೆ ಫಲಿಸಿದ್ದರಿಂದ ನನ್ನ ಹರಕೆಯನ್ನು ಪೂರ್ಣಗೊಳಿಸಿದ್ದೇನೆ ಎಂದು ಹೇಳಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…