ಮದ್ದೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜಾ ದಳ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್ ಲೇವಡಿ ಮಾಡಿದರು.
ಪಟ್ಟಣದ ಕೃಷಿ ಇಲಾಖೆಯಲ್ಲಿ ನಡೆದ ರೈತರಿಗೆ ಟಾರ್ಪಲ್ ವಿತರಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನವರಿ ಅಂತ್ಯಕ್ಕೆ ಸರ್ಕಾರ ಪತನವಾಗಲಿದೆ ಎಂಬುದು ಸರಿಯಲ್ಲ ಎಂದರು.
ಎಚ್ ಡಿ ಕುಮಾರಸ್ವಾಮಿ ರಾಜಕೀಯ ನಿರುದ್ಯೋಗಿ, ಈಗಾಗಲೇ ಅಧಿಕಾರ ಕಳೆದುಕೊಂಡು ಮೂಲೆಗುಂಪಾಗಿದ್ದಾರೆ, ಮುಂದಿನ ದಿನಗಳಲ್ಲಿ ರಾಜಕೀಯದಿಂದ ದೂರ ಸರಿದು ಹೋಗಲಿದ್ದಾರೆ,
ಮಾಜಿ ಸಚಿವ ಸಿ. ಪಿ.ಯೋಗೇಶ್ವರ್ ಸೂಕ್ತ ಸಮಯದಲ್ಲಿ ರಾಜಕೀಯ ನಿರ್ಧಾರ ತೆಗೆದುಕೊಳ್ಳದೆ ಸೋತು ರಾಜಕೀಯ ನಿರುದ್ಯೋಗಿಯಾಗಿದ್ದಾರೆ ಎಂದು ಜೆಡಿಎಸ್, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
ಕಾವೇರಿ ವಿಚಾರದಲ್ಲಿ ಆದೇಶಗಳು ತಮಿಳುನಾಡಿನ ಪರ ಬರುತ್ತಿವೆ, ಇದರಿಂದ ರಾಜ್ಯ ಸರ್ಕಾರ ಸುಮ್ಮನೆ ಕೂರುವುದಿಲ್ಲ ಈಗಾಗಲೇ ಹಿರಿಯ ಕಾನೂನು ಸಲಹೆಗಾರರ ಬಳಿ ಚರ್ಚೆ ಮಾಡಲಾಗಿದೆ, ಜಿಲ್ಲೆಯ ರೈತರು, ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ಮಾಡಿದೆ ಎಂದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…