ಮದ್ದೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜಾ ದಳ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್ ಲೇವಡಿ ಮಾಡಿದರು.
ಪಟ್ಟಣದ ಕೃಷಿ ಇಲಾಖೆಯಲ್ಲಿ ನಡೆದ ರೈತರಿಗೆ ಟಾರ್ಪಲ್ ವಿತರಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನವರಿ ಅಂತ್ಯಕ್ಕೆ ಸರ್ಕಾರ ಪತನವಾಗಲಿದೆ ಎಂಬುದು ಸರಿಯಲ್ಲ ಎಂದರು.
ಎಚ್ ಡಿ ಕುಮಾರಸ್ವಾಮಿ ರಾಜಕೀಯ ನಿರುದ್ಯೋಗಿ, ಈಗಾಗಲೇ ಅಧಿಕಾರ ಕಳೆದುಕೊಂಡು ಮೂಲೆಗುಂಪಾಗಿದ್ದಾರೆ, ಮುಂದಿನ ದಿನಗಳಲ್ಲಿ ರಾಜಕೀಯದಿಂದ ದೂರ ಸರಿದು ಹೋಗಲಿದ್ದಾರೆ,
ಮಾಜಿ ಸಚಿವ ಸಿ. ಪಿ.ಯೋಗೇಶ್ವರ್ ಸೂಕ್ತ ಸಮಯದಲ್ಲಿ ರಾಜಕೀಯ ನಿರ್ಧಾರ ತೆಗೆದುಕೊಳ್ಳದೆ ಸೋತು ರಾಜಕೀಯ ನಿರುದ್ಯೋಗಿಯಾಗಿದ್ದಾರೆ ಎಂದು ಜೆಡಿಎಸ್, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
ಕಾವೇರಿ ವಿಚಾರದಲ್ಲಿ ಆದೇಶಗಳು ತಮಿಳುನಾಡಿನ ಪರ ಬರುತ್ತಿವೆ, ಇದರಿಂದ ರಾಜ್ಯ ಸರ್ಕಾರ ಸುಮ್ಮನೆ ಕೂರುವುದಿಲ್ಲ ಈಗಾಗಲೇ ಹಿರಿಯ ಕಾನೂನು ಸಲಹೆಗಾರರ ಬಳಿ ಚರ್ಚೆ ಮಾಡಲಾಗಿದೆ, ಜಿಲ್ಲೆಯ ರೈತರು, ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ಮಾಡಿದೆ ಎಂದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…