ಮದ್ದೂರು : ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜಾ ದಳ ಶಾಸಕಾಂಗ ನಾಯಕ ಎಚ್.ಡಿ. ಕುಮಾರಸ್ವಾಮಿ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಶಾಸಕ ಕದಲೂರು ಉದಯ್ ಲೇವಡಿ ಮಾಡಿದರು.
ಪಟ್ಟಣದ ಕೃಷಿ ಇಲಾಖೆಯಲ್ಲಿ ನಡೆದ ರೈತರಿಗೆ ಟಾರ್ಪಲ್ ವಿತರಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನವರಿ ಅಂತ್ಯಕ್ಕೆ ಸರ್ಕಾರ ಪತನವಾಗಲಿದೆ ಎಂಬುದು ಸರಿಯಲ್ಲ ಎಂದರು.
ಎಚ್ ಡಿ ಕುಮಾರಸ್ವಾಮಿ ರಾಜಕೀಯ ನಿರುದ್ಯೋಗಿ, ಈಗಾಗಲೇ ಅಧಿಕಾರ ಕಳೆದುಕೊಂಡು ಮೂಲೆಗುಂಪಾಗಿದ್ದಾರೆ, ಮುಂದಿನ ದಿನಗಳಲ್ಲಿ ರಾಜಕೀಯದಿಂದ ದೂರ ಸರಿದು ಹೋಗಲಿದ್ದಾರೆ,
ಮಾಜಿ ಸಚಿವ ಸಿ. ಪಿ.ಯೋಗೇಶ್ವರ್ ಸೂಕ್ತ ಸಮಯದಲ್ಲಿ ರಾಜಕೀಯ ನಿರ್ಧಾರ ತೆಗೆದುಕೊಳ್ಳದೆ ಸೋತು ರಾಜಕೀಯ ನಿರುದ್ಯೋಗಿಯಾಗಿದ್ದಾರೆ ಎಂದು ಜೆಡಿಎಸ್, ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
ಕಾವೇರಿ ವಿಚಾರದಲ್ಲಿ ಆದೇಶಗಳು ತಮಿಳುನಾಡಿನ ಪರ ಬರುತ್ತಿವೆ, ಇದರಿಂದ ರಾಜ್ಯ ಸರ್ಕಾರ ಸುಮ್ಮನೆ ಕೂರುವುದಿಲ್ಲ ಈಗಾಗಲೇ ಹಿರಿಯ ಕಾನೂನು ಸಲಹೆಗಾರರ ಬಳಿ ಚರ್ಚೆ ಮಾಡಲಾಗಿದೆ, ಜಿಲ್ಲೆಯ ರೈತರು, ರಾಜ್ಯದ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ಮಾಡಿದೆ ಎಂದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…