ಮಂಡ್ಯ

ಕಾವೇರಿ ಆರತಿಗೆ ₹100 ಕೋಟಿ : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರೋಧ

ಮಂಡ್ಯ: ಕಾವೇರಿ ಆರತಿಗೆ ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನಗರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾವೇರಿ ಆರತಿಗೆ 100 ಕೋಟಿ ಯಾಕೆ ಬೇಕು? ನಮ್ಮ ಪುಟ್ಟರಾಜು ಕೆರೆತಣ್ಣೂರಿನಲ್ಲಿ ಮಾಡಿದಾಗ ಇಂಥ ಕಾರ್ಯಕ್ರಮ ಮಾಡಿದಾಗ ಎಷ್ಟು ಖರ್ಚು ಆಯಿತು ಎಂದು ಕೇಳಿ. ಇಷ್ಟೊಂದು ಬೃಹತ್ ಮೊತ್ತ ವೆಚ್ಚ ಮಾಡುವುದು ಏತಕ್ಕೆ? ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧ ಇದೆ ಎಂದರು.

ಕಾಲ್ತುಳಿತ; ಸರ್ಕಾರದಿಂದ ಗಂಟೆಗೊಂದು ನಿರ್ಧಾರ
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಟೆ ಗಂಟೆಗೊಂದು ನಿರ್ಧಾರ ಮಾಡುತ್ತಿದೆ. ಅಂತಿಮವಾಗಿ ಏನು ಮಾಡುತ್ತದೆ ಎಂಬುದನ್ನು ನೋಡಬೇಕು. ಮೊದಲು ಮ್ಯಾಜಿಸ್ಟ್ರಿಯಲ್ ತನಿಖೆ ಎಂದರು. ಆಮೇಲೆ ನ್ಯಾಯಾಂಗ ತನಿಖೆ ಎಂದು ಹೇಳಿದರು. ಅದಾದ ಮೇಲೆ ಸಿಐಡಿ ಕೊಡುತ್ತೇವೆ ಎನ್ನುತ್ತಿದ್ದಾರೆ. ಅಂತಿಮವಾಗಿ ಯಾವ ತನಿಖೆ ವರದಿ ಪಡೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು ಎಂದು ಟೀಕಿಸಿದರು.

ಇದನ್ನು ಸರ್ಕಾರ ಎನ್ನಲು ಆಗುತ್ತದೆಯೇ? ಯಾವುದೇ ತೀರ್ಮಾನ ಮಾಡಿದರೆ ಸ್ಪಷ್ಟತೆ ಇರಬೇಕು. ಅಧಿಕಾರಿಗಳ‌ ತಪ್ಪು ಏನಿತ್ತು? ಎಫ್‌ಐಆರ್‌ನಲ್ಲಿ ಅಧಿಕಾರಿಗಳು ಕರ್ತವ್ಯ ಲೋಪ ಆಗಿಲ್ಲ ಎಂದು ಉಲ್ಲೇಖ ಮಾಡಿದ್ದಾರೆ. ಸರ್ಕಾರ ಸಂಪೂರ್ಣವಾಗಿ ವಿಫಲ ಆಗಿದೆ.

ಪೆಹಲ್ಗಾಂ, ಪ್ರಯಾಗ್‌ರಾಜ್‌ನಲ್ಲಿ ಘಟನೆಗಳನ್ನು ಹೇಳುತ್ತಿದ್ದಾರೆ. ಆ ಘಟನೆಗಳಿಗೂ ಇದಕ್ಕೂ ಏನು ಸಂಬಂಧ? ಇಲ್ಲಿ ಇವರು ಮಾಡಿರುವ ತಪ್ಪಿಗೆ ಪೆಹಲ್ಗಾಂ, ಪ್ರಯಾಗ್‌ರಾಜ್ ವಿಚಾರ ತರುತ್ತಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಮುಂಬೈ ಮೇಲೆ ಉಗ್ರರ ದಾಳಿ ಆಯಿತಲ್ಲ, ಆಗ ಸಿಂಗ್ ಅವರು ರಾಜೀನಾಮೆ ನೀಡಿದ್ದರಾ? ಕೇವಲ ಸಿಎಂ, ಡಿಸಿಎಂ ವರ್ಚಸ್ಸು ಹೆಚ್ಚಿಸಿಕೊಳ್ಳಲಿಕ್ಕೆ ಮಾಡಿದ ಶೋ ಇದು ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ಕುಮಾರಸ್ವಾಮಿ ತಮ್ಮ ಆರೋಗ್ಯ ನೋಡಿಕೊಳ್ಳಲಿ ಎಂದು ಹೇಳಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವರು, ನನ್ನ ಆರೋಗ್ಯವನ್ನ ದೇವರು ನೋಡಿಕೊಳ್ಳುತ್ತಾನೆ. ಮಂಡ್ಯ ಜನರ ಹಾರೈಕೆಯಿಂದ ನನಗೆ ಏನು ಆಗಲ್ಲ. ನಾನು ಯಾವುದೇ ಒತ್ತಡದಲ್ಲಿ ಇಲ್ಲ. ಅವರೇ ಒತ್ತಡದಲ್ಲಿ ಇದ್ದಾರೆ ಎಂದು ಟಾಂಗ್ ನೀಡಿದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

4 mins ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

13 mins ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

25 mins ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

1 hour ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

1 hour ago

ಪ್ರವಾಸಿಗರ ಆಕರ್ಷಣೆಯ ಭದ್ರಾದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

2 hours ago