ಮಂಡ್ಯ

ಕಾವೇರಿ ಆರತಿಗೆ ₹100 ಕೋಟಿ : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರೋಧ

ಮಂಡ್ಯ: ಕಾವೇರಿ ಆರತಿಗೆ ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನಗರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾವೇರಿ ಆರತಿಗೆ 100 ಕೋಟಿ ಯಾಕೆ ಬೇಕು? ನಮ್ಮ ಪುಟ್ಟರಾಜು ಕೆರೆತಣ್ಣೂರಿನಲ್ಲಿ ಮಾಡಿದಾಗ ಇಂಥ ಕಾರ್ಯಕ್ರಮ ಮಾಡಿದಾಗ ಎಷ್ಟು ಖರ್ಚು ಆಯಿತು ಎಂದು ಕೇಳಿ. ಇಷ್ಟೊಂದು ಬೃಹತ್ ಮೊತ್ತ ವೆಚ್ಚ ಮಾಡುವುದು ಏತಕ್ಕೆ? ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧ ಇದೆ ಎಂದರು.

ಕಾಲ್ತುಳಿತ; ಸರ್ಕಾರದಿಂದ ಗಂಟೆಗೊಂದು ನಿರ್ಧಾರ
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಟೆ ಗಂಟೆಗೊಂದು ನಿರ್ಧಾರ ಮಾಡುತ್ತಿದೆ. ಅಂತಿಮವಾಗಿ ಏನು ಮಾಡುತ್ತದೆ ಎಂಬುದನ್ನು ನೋಡಬೇಕು. ಮೊದಲು ಮ್ಯಾಜಿಸ್ಟ್ರಿಯಲ್ ತನಿಖೆ ಎಂದರು. ಆಮೇಲೆ ನ್ಯಾಯಾಂಗ ತನಿಖೆ ಎಂದು ಹೇಳಿದರು. ಅದಾದ ಮೇಲೆ ಸಿಐಡಿ ಕೊಡುತ್ತೇವೆ ಎನ್ನುತ್ತಿದ್ದಾರೆ. ಅಂತಿಮವಾಗಿ ಯಾವ ತನಿಖೆ ವರದಿ ಪಡೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು ಎಂದು ಟೀಕಿಸಿದರು.

ಇದನ್ನು ಸರ್ಕಾರ ಎನ್ನಲು ಆಗುತ್ತದೆಯೇ? ಯಾವುದೇ ತೀರ್ಮಾನ ಮಾಡಿದರೆ ಸ್ಪಷ್ಟತೆ ಇರಬೇಕು. ಅಧಿಕಾರಿಗಳ‌ ತಪ್ಪು ಏನಿತ್ತು? ಎಫ್‌ಐಆರ್‌ನಲ್ಲಿ ಅಧಿಕಾರಿಗಳು ಕರ್ತವ್ಯ ಲೋಪ ಆಗಿಲ್ಲ ಎಂದು ಉಲ್ಲೇಖ ಮಾಡಿದ್ದಾರೆ. ಸರ್ಕಾರ ಸಂಪೂರ್ಣವಾಗಿ ವಿಫಲ ಆಗಿದೆ.

ಪೆಹಲ್ಗಾಂ, ಪ್ರಯಾಗ್‌ರಾಜ್‌ನಲ್ಲಿ ಘಟನೆಗಳನ್ನು ಹೇಳುತ್ತಿದ್ದಾರೆ. ಆ ಘಟನೆಗಳಿಗೂ ಇದಕ್ಕೂ ಏನು ಸಂಬಂಧ? ಇಲ್ಲಿ ಇವರು ಮಾಡಿರುವ ತಪ್ಪಿಗೆ ಪೆಹಲ್ಗಾಂ, ಪ್ರಯಾಗ್‌ರಾಜ್ ವಿಚಾರ ತರುತ್ತಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಮುಂಬೈ ಮೇಲೆ ಉಗ್ರರ ದಾಳಿ ಆಯಿತಲ್ಲ, ಆಗ ಸಿಂಗ್ ಅವರು ರಾಜೀನಾಮೆ ನೀಡಿದ್ದರಾ? ಕೇವಲ ಸಿಎಂ, ಡಿಸಿಎಂ ವರ್ಚಸ್ಸು ಹೆಚ್ಚಿಸಿಕೊಳ್ಳಲಿಕ್ಕೆ ಮಾಡಿದ ಶೋ ಇದು ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ಕುಮಾರಸ್ವಾಮಿ ತಮ್ಮ ಆರೋಗ್ಯ ನೋಡಿಕೊಳ್ಳಲಿ ಎಂದು ಹೇಳಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವರು, ನನ್ನ ಆರೋಗ್ಯವನ್ನ ದೇವರು ನೋಡಿಕೊಳ್ಳುತ್ತಾನೆ. ಮಂಡ್ಯ ಜನರ ಹಾರೈಕೆಯಿಂದ ನನಗೆ ಏನು ಆಗಲ್ಲ. ನಾನು ಯಾವುದೇ ಒತ್ತಡದಲ್ಲಿ ಇಲ್ಲ. ಅವರೇ ಒತ್ತಡದಲ್ಲಿ ಇದ್ದಾರೆ ಎಂದು ಟಾಂಗ್ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

31 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

33 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

36 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

40 mins ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

44 mins ago