ಮಂಡ್ಯ: ಕಾವೇರಿ ಆರತಿಗೆ ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ನಗರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾವೇರಿ ಆರತಿಗೆ 100 ಕೋಟಿ ಯಾಕೆ ಬೇಕು? ನಮ್ಮ ಪುಟ್ಟರಾಜು ಕೆರೆತಣ್ಣೂರಿನಲ್ಲಿ ಮಾಡಿದಾಗ ಇಂಥ ಕಾರ್ಯಕ್ರಮ ಮಾಡಿದಾಗ ಎಷ್ಟು ಖರ್ಚು ಆಯಿತು ಎಂದು ಕೇಳಿ. ಇಷ್ಟೊಂದು ಬೃಹತ್ ಮೊತ್ತ ವೆಚ್ಚ ಮಾಡುವುದು ಏತಕ್ಕೆ? ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧ ಇದೆ ಎಂದರು.
ಕಾಲ್ತುಳಿತ; ಸರ್ಕಾರದಿಂದ ಗಂಟೆಗೊಂದು ನಿರ್ಧಾರ
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಟೆ ಗಂಟೆಗೊಂದು ನಿರ್ಧಾರ ಮಾಡುತ್ತಿದೆ. ಅಂತಿಮವಾಗಿ ಏನು ಮಾಡುತ್ತದೆ ಎಂಬುದನ್ನು ನೋಡಬೇಕು. ಮೊದಲು ಮ್ಯಾಜಿಸ್ಟ್ರಿಯಲ್ ತನಿಖೆ ಎಂದರು. ಆಮೇಲೆ ನ್ಯಾಯಾಂಗ ತನಿಖೆ ಎಂದು ಹೇಳಿದರು. ಅದಾದ ಮೇಲೆ ಸಿಐಡಿ ಕೊಡುತ್ತೇವೆ ಎನ್ನುತ್ತಿದ್ದಾರೆ. ಅಂತಿಮವಾಗಿ ಯಾವ ತನಿಖೆ ವರದಿ ಪಡೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು ಎಂದು ಟೀಕಿಸಿದರು.
ಇದನ್ನು ಸರ್ಕಾರ ಎನ್ನಲು ಆಗುತ್ತದೆಯೇ? ಯಾವುದೇ ತೀರ್ಮಾನ ಮಾಡಿದರೆ ಸ್ಪಷ್ಟತೆ ಇರಬೇಕು. ಅಧಿಕಾರಿಗಳ ತಪ್ಪು ಏನಿತ್ತು? ಎಫ್ಐಆರ್ನಲ್ಲಿ ಅಧಿಕಾರಿಗಳು ಕರ್ತವ್ಯ ಲೋಪ ಆಗಿಲ್ಲ ಎಂದು ಉಲ್ಲೇಖ ಮಾಡಿದ್ದಾರೆ. ಸರ್ಕಾರ ಸಂಪೂರ್ಣವಾಗಿ ವಿಫಲ ಆಗಿದೆ.
ಪೆಹಲ್ಗಾಂ, ಪ್ರಯಾಗ್ರಾಜ್ನಲ್ಲಿ ಘಟನೆಗಳನ್ನು ಹೇಳುತ್ತಿದ್ದಾರೆ. ಆ ಘಟನೆಗಳಿಗೂ ಇದಕ್ಕೂ ಏನು ಸಂಬಂಧ? ಇಲ್ಲಿ ಇವರು ಮಾಡಿರುವ ತಪ್ಪಿಗೆ ಪೆಹಲ್ಗಾಂ, ಪ್ರಯಾಗ್ರಾಜ್ ವಿಚಾರ ತರುತ್ತಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಮುಂಬೈ ಮೇಲೆ ಉಗ್ರರ ದಾಳಿ ಆಯಿತಲ್ಲ, ಆಗ ಸಿಂಗ್ ಅವರು ರಾಜೀನಾಮೆ ನೀಡಿದ್ದರಾ? ಕೇವಲ ಸಿಎಂ, ಡಿಸಿಎಂ ವರ್ಚಸ್ಸು ಹೆಚ್ಚಿಸಿಕೊಳ್ಳಲಿಕ್ಕೆ ಮಾಡಿದ ಶೋ ಇದು ಎಂದು ಅವರು ಟೀಕಾ ಪ್ರಹಾರ ನಡೆಸಿದರು.
ಕುಮಾರಸ್ವಾಮಿ ತಮ್ಮ ಆರೋಗ್ಯ ನೋಡಿಕೊಳ್ಳಲಿ ಎಂದು ಹೇಳಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವರು, ನನ್ನ ಆರೋಗ್ಯವನ್ನ ದೇವರು ನೋಡಿಕೊಳ್ಳುತ್ತಾನೆ. ಮಂಡ್ಯ ಜನರ ಹಾರೈಕೆಯಿಂದ ನನಗೆ ಏನು ಆಗಲ್ಲ. ನಾನು ಯಾವುದೇ ಒತ್ತಡದಲ್ಲಿ ಇಲ್ಲ. ಅವರೇ ಒತ್ತಡದಲ್ಲಿ ಇದ್ದಾರೆ ಎಂದು ಟಾಂಗ್ ನೀಡಿದರು.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…