ಮಂಡ್ಯ

ಕಾವೇರಿ ಆರತಿಗೆ ₹100 ಕೋಟಿ : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರೋಧ

ಮಂಡ್ಯ: ಕಾವೇರಿ ಆರತಿಗೆ ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನಗರದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾವೇರಿ ಆರತಿಗೆ 100 ಕೋಟಿ ಯಾಕೆ ಬೇಕು? ನಮ್ಮ ಪುಟ್ಟರಾಜು ಕೆರೆತಣ್ಣೂರಿನಲ್ಲಿ ಮಾಡಿದಾಗ ಇಂಥ ಕಾರ್ಯಕ್ರಮ ಮಾಡಿದಾಗ ಎಷ್ಟು ಖರ್ಚು ಆಯಿತು ಎಂದು ಕೇಳಿ. ಇಷ್ಟೊಂದು ಬೃಹತ್ ಮೊತ್ತ ವೆಚ್ಚ ಮಾಡುವುದು ಏತಕ್ಕೆ? ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧ ಇದೆ ಎಂದರು.

ಕಾಲ್ತುಳಿತ; ಸರ್ಕಾರದಿಂದ ಗಂಟೆಗೊಂದು ನಿರ್ಧಾರ
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ವಿಚಾರದಲ್ಲಿ ರಾಜ್ಯ ಸರ್ಕಾರ ಗಂಟೆ ಗಂಟೆಗೊಂದು ನಿರ್ಧಾರ ಮಾಡುತ್ತಿದೆ. ಅಂತಿಮವಾಗಿ ಏನು ಮಾಡುತ್ತದೆ ಎಂಬುದನ್ನು ನೋಡಬೇಕು. ಮೊದಲು ಮ್ಯಾಜಿಸ್ಟ್ರಿಯಲ್ ತನಿಖೆ ಎಂದರು. ಆಮೇಲೆ ನ್ಯಾಯಾಂಗ ತನಿಖೆ ಎಂದು ಹೇಳಿದರು. ಅದಾದ ಮೇಲೆ ಸಿಐಡಿ ಕೊಡುತ್ತೇವೆ ಎನ್ನುತ್ತಿದ್ದಾರೆ. ಅಂತಿಮವಾಗಿ ಯಾವ ತನಿಖೆ ವರದಿ ಪಡೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು ಎಂದು ಟೀಕಿಸಿದರು.

ಇದನ್ನು ಸರ್ಕಾರ ಎನ್ನಲು ಆಗುತ್ತದೆಯೇ? ಯಾವುದೇ ತೀರ್ಮಾನ ಮಾಡಿದರೆ ಸ್ಪಷ್ಟತೆ ಇರಬೇಕು. ಅಧಿಕಾರಿಗಳ‌ ತಪ್ಪು ಏನಿತ್ತು? ಎಫ್‌ಐಆರ್‌ನಲ್ಲಿ ಅಧಿಕಾರಿಗಳು ಕರ್ತವ್ಯ ಲೋಪ ಆಗಿಲ್ಲ ಎಂದು ಉಲ್ಲೇಖ ಮಾಡಿದ್ದಾರೆ. ಸರ್ಕಾರ ಸಂಪೂರ್ಣವಾಗಿ ವಿಫಲ ಆಗಿದೆ.

ಪೆಹಲ್ಗಾಂ, ಪ್ರಯಾಗ್‌ರಾಜ್‌ನಲ್ಲಿ ಘಟನೆಗಳನ್ನು ಹೇಳುತ್ತಿದ್ದಾರೆ. ಆ ಘಟನೆಗಳಿಗೂ ಇದಕ್ಕೂ ಏನು ಸಂಬಂಧ? ಇಲ್ಲಿ ಇವರು ಮಾಡಿರುವ ತಪ್ಪಿಗೆ ಪೆಹಲ್ಗಾಂ, ಪ್ರಯಾಗ್‌ರಾಜ್ ವಿಚಾರ ತರುತ್ತಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಮುಂಬೈ ಮೇಲೆ ಉಗ್ರರ ದಾಳಿ ಆಯಿತಲ್ಲ, ಆಗ ಸಿಂಗ್ ಅವರು ರಾಜೀನಾಮೆ ನೀಡಿದ್ದರಾ? ಕೇವಲ ಸಿಎಂ, ಡಿಸಿಎಂ ವರ್ಚಸ್ಸು ಹೆಚ್ಚಿಸಿಕೊಳ್ಳಲಿಕ್ಕೆ ಮಾಡಿದ ಶೋ ಇದು ಎಂದು ಅವರು ಟೀಕಾ ಪ್ರಹಾರ ನಡೆಸಿದರು.

ಕುಮಾರಸ್ವಾಮಿ ತಮ್ಮ ಆರೋಗ್ಯ ನೋಡಿಕೊಳ್ಳಲಿ ಎಂದು ಹೇಳಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವರು, ನನ್ನ ಆರೋಗ್ಯವನ್ನ ದೇವರು ನೋಡಿಕೊಳ್ಳುತ್ತಾನೆ. ಮಂಡ್ಯ ಜನರ ಹಾರೈಕೆಯಿಂದ ನನಗೆ ಏನು ಆಗಲ್ಲ. ನಾನು ಯಾವುದೇ ಒತ್ತಡದಲ್ಲಿ ಇಲ್ಲ. ಅವರೇ ಒತ್ತಡದಲ್ಲಿ ಇದ್ದಾರೆ ಎಂದು ಟಾಂಗ್ ನೀಡಿದರು.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

55 mins ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

5 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago