ಮಂಡ್ಯ

ಜೆಡಿಎಸ್‌ಗೆ ಮರುಜನ್ಮ ಕೊಟ್ಟಿದ್ದೇವೆ ಎಂದ ಯತ್ನಾಳ್‌ಗೆ ಉತ್ತರ ಕೊಟ್ಟ ಎಚ್‌ಡಿಕೆ

ಮಂಡ್ಯ: ಜೆಡಿಎಸ್‌ಗೆ ಮರುಜನ್ಮ ಕೊಟ್ಟಿದ್ದೇವೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಕುರಿತು ಖಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡೋಕೆ ಆಗಲ್ಲ ಎಂದಿದ್ದಾರೆ.

ಮಂಡ್ಯದಲ್ಲಿ ಇಂದು ( ಅಕ್ಟೋಬರ್‌ 19 ) ಬೆಳಗ್ಗೆ ರೈತ ಸಭಾಂಗಣ ನವೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು ಯಾವ ರೀತಿ ನನ್ನ ಪಕ್ಷಕ್ಕೆ ಶಕ್ತಿ ತುಂಬಿದ್ದೇನೆ ಎಂಬ ಚರ್ಚೆ ಈಗ ಅನಗತ್ಯ. ದೆಹಲಿ ನಾಯಕರಿಗೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಅದನ್ನೆಲ್ಲ ನಾನು ಬೀದಿಯಲ್ಲಿ ನಿಂತು ಚರ್ಚೆ ಮಾಡಲೇ? ಅದರ ಅವಶ್ಯಕತೆ ಇಲ್ಲ. ನಾನು ಈ ಕ್ಷಣದವರೆಗೂ ಜೆಡಿಎಸ್ – ಬಿಜೆಪಿ ಎಂದು ಬೇರ್ಪಡಿಸಿ ಮಾತನಾಡಿಲ್ಲ ಎಂದು ಹೇಳಿದರು.

ನಾನು ಚನ್ನಪಟ್ಟಣ ಸೇರಿದಂತೆ ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಯೇ ನಿಲ್ಲುತ್ತಾರೆ ಎಂದು ಹೇಳಿದ್ದೇನೇ ಹೊರತು ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇನೆ ಎಂದು ಹೇಳಿಲ್ಲ. ತ್ಯಾಗದ ಬಗ್ಗೆ ಮಾತನಾಡುವವರು ಅವರ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಬೇಕು‌. ನಮ್ಮ ಮೈತ್ರಿಗೆ ಅಡ್ಡಿ ಆಗಬಾರದು ಎಂದು ನಡೆದುಕೊಳ್ಳುತ್ತಿದ್ದೇನೆ. ಅರ್ಥ ಮಾಡಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ

ಈ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಹೇಗಿದೆ ನೋಡ್ತಿದ್ದೇನೆ. ಆಡಳಿತ ನಡಿತಿದ್ಯಾ? ಸರ್ಕಾರ ಇದ್ಯಾ? ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ. ಬಾಗಲಕೋಟೆ, ಹಾವೇರಿ, ಚಿತ್ರದುರ್ಗದಲ್ಲಿ ಏನಾಗಿದೆ‌? ಈರುಳ್ಳಿ, ದ್ರಾಕ್ಷಿ, ಜೋಳ ಬೆಳೆಯುವವರ ಸ್ಥಿತಿ ಏನಾಗಿದೆ ಅದರ ಬಗ್ಗೆ ಕೇಳುವವರು ದಿಕ್ಕಿಲ್ಲದಂತಾಗಿದೆ. ಬೆಂಗಳೂರು ನಗರ ಜಲಾವೃತವಾಗಿದೆ, ಯಾರಾದರೂ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರಾ, ಅದರ ಬಗ್ಗೆ ಯಾರಿಗೂ ಚಿಂತನೆ ಇಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.

ಚನ್ನಪಟ್ಟಣ ಕ್ಷೇತ್ರದ ಬಗ್ಗೆ ಇಂದು ಸಂಜೆ ಚರ್ಚೆ

ಚನ್ನಪಟ್ಟಣ ಉಪ ಚುನಾವಣೆಯ ಎನ್‌ಡಿಎ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಇಂದು ಸಂಜೆ ಬೆಂಗಳೂರಿನಲ್ಲಿ ಸಭೆ ಇದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸುವುದಾಗಿ ಕೇಂದ್ರ ಸಚಿವರು ಹೇಳಿದರು. ಎಲ್ಲ ನಾಯಕರು ಕೂತು ಚರ್ಚೆ ಮಾಡುತ್ತಿದ್ದೇವೆ. ಅಭ್ಯರ್ಥಿಯ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಅವರು ಹೇಳಿದರು.

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

4 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

4 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago