ಮಂಡ್ಯ

ಡಿಕೆಶಿ ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ಕೊಡುತ್ತಾರೋ ನೋಡೋಣ ಎಂದ ಎಚ್.ಡಿ ಕುಮಾರಸ್ವಾಮಿ

ಮಂಡ್ಯ: ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು‌ ತಿರುಗೇಟು ಕೊಟ್ಟಿದ್ದು, ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ‌‌ ಎಂದು ಟಾಂಗ್ ನೀಡಿದರು.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಡಿಕೆಶಿಯ ಮುಂದಿನ ಸ್ಥಿತಿಗತಿಗಳ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಂತೆ ಇದ್ದ ಅವರ ಹೇಳಿಕೆ, ಯಾರು ಮೆಂಟಲ್ ಆಸ್ಪತ್ರೆಗೆ ಹೋಗುತ್ತಾರೆ ನೋಡೋಣ ಬನ್ನಿ. ನಾವು ಮೆಂಟಲ್ ಆಸ್ಪತ್ರೆಗೆ ಹೋಗಿ ಟ್ರೀಟ್ಮೆಂಟ್ ತಗೆದುಕೊಳ್ಳಬಹುದು‌, ಇರಲಿ.. ಆದರೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ತಾರೆ ನೋಡೋಣ ಬನ್ನಿ‌‌ ಎಂದು ಡಿ.ಕೆ.ಶಿವಕುಮಾರ್ ಗೆ ತಿರುಗೇಟು ಕೊಟ್ಟರು.

ಆ ವ್ಯಕ್ತಿಯ ಹೇಳಿಕೆಗೆ ಹೆಚ್ಚು ಮಹತ್ವ ಕೊಡುವ ಅಗತ್ಯ ಇಲ್ಲ. ಪಾದಯಾತ್ರೆ ಮುಕ್ತಾಯ ಮಾಡಿದ್ದೇವೆ. ಕಾಂಗ್ರೆಸ್ ವಿರುದ್ಧ ಹೋರಾಟ ನಿರಂತರವಾಗಿ ಇರುತ್ತದೆ. ಪಾದಯಾತ್ರೆ ಯಶಸ್ಸು ಸಹಿಸಲಾಗದೆ ಈ ರೀತಿ ಮಾತನಾಡುತ್ತಿದ್ದಾರೆ. ಲೂಟಿ ಮಾಡಿಕೊಂಡು ಸಾಗುತ್ತಿದೆ ಸರಕಾರ. ನಮ್ಮ ಬಗ್ಗೆ ಸಹಿಷ್ಣುತೆ ಇಲ್ಲದೆ ವ್ಯಕ್ತಿಗತ ಟೀಕೆ ಮಾಡುತ್ತಿದ್ದಾರೆ. ಜನರೇ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.

ನಾವು ಪಾದಯಾತ್ರೆ ಮಾಡಿದ್ದು ಜನಜಾಗೃತಿ ಮೂಡಿಸಲಿಕ್ಕೆ. ಈ ಸರ್ಕಾರದ ಭ್ರಷ್ಟಾಚಾರವನ್ನು ತಿಳಿಸಲು ಪಾದಯಾತ್ರೆ ಮಾಡಿದ್ದೇವೆ. ಮುಂದೆ ಕಾನೂನು ರೀತಿಯ ಹೋರಾಟವನ್ನೂ ನಡೆಸುತ್ತೇವೆ. ಕರ್ನಾಟಕದ ಖಜಾನೆ ಸದಾ ತುಂಬಿರುತ್ತದೆ. ಈ ಖಜಾನೆಯನ್ನು ಈ ಸರಕಾರ ಲೂಟಿ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಈ ಸರಕಾರ ಮಾಡುತ್ತಿಲ್ಲ. ಇಲ್ಲಿ ಸಿಎಂ ಕುರ್ಚಿ ಅಲ್ಲಾಡುತ್ತಿಲ್ಲ, ಕುರ್ಚಿಯಲ್ಲಿ ಕೂತವರು ಅಲ್ಲಾಡುತ್ತಿದ್ದಾರೆ ಅಷ್ಟೇ..ರಾಜ್ಯದ ಅಧಿಕಾರದ ಕುರ್ಚಿ ಭದ್ರವಾಗಿಯೇ ಇರುತ್ತದೆ. ಕೆಂಗಲ್ ಹನುಮಂತಯ್ಯ ಕಟ್ಟಿರುವ ವಿಧಾನಸೌಧ ಕುರ್ಚಿ ಗಟ್ಟಿಯಾಗಿದೆ. ಕುರ್ಚಿಯಲ್ಲಿ‌ ಕೂರೋರು ಭದ್ರವಾಗಿ ಇರೋಕೆ ಆಗಲ್ಲ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…

7 mins ago

ʼದೇಶದ ನಿರ್ಧಾರಗಳು ವಿದೇಶಗಳಿಂದ ಆಗುತ್ತಿರುವಂತಿದೆʼ

  ಕೃಷಿ ಚಳವಳಿಯ ಪ್ರಮುಖ ನಾಯಕರಾದ ರಾಕೇಶ್ ಟಿಕಾಯತ್ ಹಾಗೂ ಸಂಯುಕ್ತ ಕಿಸಾನ್ ಮೋರ್ಚಾದ ಪ್ರಮುಖ ಮುಖಂಡರಾದ ಯುದ್ಧವೀರ್ ಸಿಂಗ್…

2 hours ago

ಓದುಗರ ಪತ್ರ | ಹತ್ತಿ ಬೆಳೆಗಾರರ ಸಮಸ್ಯೆ ಪರಿಹರಿಸಿ

ಹತ್ತಿ ಬೆಳೆಗಾರರು ರಾಜ್ಯದಲ್ಲಿ ವಾರ್ಷಿಕ ಸುಮಾರು 200 ಕೋಟಿ ರೂ.ಗೂ ಅಧಿಕ ನಷ್ಟ ಅನುಭವಿಸುತ್ತಿದ್ದಾರೆ. ಬಿತ್ತನೆ ಬೀಜ ಮಾರಾಟ ಮಾಡುವ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆ.14 ಶನಿವಾರ

4 hours ago

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

14 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

15 hours ago