ಮಂಡ್ಯ: ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟಿದ್ದು, ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ ಎಂದು ಟಾಂಗ್ ನೀಡಿದರು.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಡಿಕೆಶಿಯ ಮುಂದಿನ ಸ್ಥಿತಿಗತಿಗಳ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಂತೆ ಇದ್ದ ಅವರ ಹೇಳಿಕೆ, ಯಾರು ಮೆಂಟಲ್ ಆಸ್ಪತ್ರೆಗೆ ಹೋಗುತ್ತಾರೆ ನೋಡೋಣ ಬನ್ನಿ. ನಾವು ಮೆಂಟಲ್ ಆಸ್ಪತ್ರೆಗೆ ಹೋಗಿ ಟ್ರೀಟ್ಮೆಂಟ್ ತಗೆದುಕೊಳ್ಳಬಹುದು, ಇರಲಿ.. ಆದರೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ತಾರೆ ನೋಡೋಣ ಬನ್ನಿ ಎಂದು ಡಿ.ಕೆ.ಶಿವಕುಮಾರ್ ಗೆ ತಿರುಗೇಟು ಕೊಟ್ಟರು.
ಆ ವ್ಯಕ್ತಿಯ ಹೇಳಿಕೆಗೆ ಹೆಚ್ಚು ಮಹತ್ವ ಕೊಡುವ ಅಗತ್ಯ ಇಲ್ಲ. ಪಾದಯಾತ್ರೆ ಮುಕ್ತಾಯ ಮಾಡಿದ್ದೇವೆ. ಕಾಂಗ್ರೆಸ್ ವಿರುದ್ಧ ಹೋರಾಟ ನಿರಂತರವಾಗಿ ಇರುತ್ತದೆ. ಪಾದಯಾತ್ರೆ ಯಶಸ್ಸು ಸಹಿಸಲಾಗದೆ ಈ ರೀತಿ ಮಾತನಾಡುತ್ತಿದ್ದಾರೆ. ಲೂಟಿ ಮಾಡಿಕೊಂಡು ಸಾಗುತ್ತಿದೆ ಸರಕಾರ. ನಮ್ಮ ಬಗ್ಗೆ ಸಹಿಷ್ಣುತೆ ಇಲ್ಲದೆ ವ್ಯಕ್ತಿಗತ ಟೀಕೆ ಮಾಡುತ್ತಿದ್ದಾರೆ. ಜನರೇ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.
ನಾವು ಪಾದಯಾತ್ರೆ ಮಾಡಿದ್ದು ಜನಜಾಗೃತಿ ಮೂಡಿಸಲಿಕ್ಕೆ. ಈ ಸರ್ಕಾರದ ಭ್ರಷ್ಟಾಚಾರವನ್ನು ತಿಳಿಸಲು ಪಾದಯಾತ್ರೆ ಮಾಡಿದ್ದೇವೆ. ಮುಂದೆ ಕಾನೂನು ರೀತಿಯ ಹೋರಾಟವನ್ನೂ ನಡೆಸುತ್ತೇವೆ. ಕರ್ನಾಟಕದ ಖಜಾನೆ ಸದಾ ತುಂಬಿರುತ್ತದೆ. ಈ ಖಜಾನೆಯನ್ನು ಈ ಸರಕಾರ ಲೂಟಿ ಮಾಡುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಈ ಸರಕಾರ ಮಾಡುತ್ತಿಲ್ಲ. ಇಲ್ಲಿ ಸಿಎಂ ಕುರ್ಚಿ ಅಲ್ಲಾಡುತ್ತಿಲ್ಲ, ಕುರ್ಚಿಯಲ್ಲಿ ಕೂತವರು ಅಲ್ಲಾಡುತ್ತಿದ್ದಾರೆ ಅಷ್ಟೇ..ರಾಜ್ಯದ ಅಧಿಕಾರದ ಕುರ್ಚಿ ಭದ್ರವಾಗಿಯೇ ಇರುತ್ತದೆ. ಕೆಂಗಲ್ ಹನುಮಂತಯ್ಯ ಕಟ್ಟಿರುವ ವಿಧಾನಸೌಧ ಕುರ್ಚಿ ಗಟ್ಟಿಯಾಗಿದೆ. ಕುರ್ಚಿಯಲ್ಲಿ ಕೂರೋರು ಭದ್ರವಾಗಿ ಇರೋಕೆ ಆಗಲ್ಲ ಎಂದು ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…