ಮಂಡ್ಯ

ಎಚ್‌.ಡಿ ಕುಮಾರಸ್ವಾಮಿ ಜಿಲ್ಲೆಗೆ ಅನುದಾನ ತರಲಿ : ಸಚಿವ ಚಲುವರಾಯಸ್ವಾಮಿ

ಮಂಡ್ಯ : ಸಂಸದ ಎಚ್‌.ಡಿ ಕುಮಾರಸ್ವಾಮಿ ಅವರು ಕೇಂದ್ರ ಕೈಗಾರಿಕಾ ಮಂತ್ರಿಯಾಗಿರುವುದರಿಂದ ರಾಷ್ಟ್ರದ ಕೈಗಾರಿಕಾ ಸಂಸ್ಥೆಗಳಿಂದ ಅವರಿಗೆ ಸಿ.ಆರ್.ಎಸ್ ಅನುದಾನ ಬರುತ್ತದೆ. ಅದನ್ನಲ್ಲೆ ಬಳಸಿಕೊಂಡು ಜಿಲ್ಲೆಯನ್ನು ಅಭಿವೃದ್ಧಿ ಮಾಡಲಿ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಭಾನುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಮೈಷುಗರ್ ಶಾಲೆಗೆ 25 ಕೋಟಿ ಕೊಡಿಸುವುದಾಗಿ ಪತ್ರಿಕಾಗೋಷ್ಠಿ ಕರೆದು ಹೇಳಿದರು. ಆದರೆ ಇನ್ನೂ ಹಣ ಬಿಡುಗಡೆ ಗೊಂಡಿಲ್ಲ ಎಂದು ವ್ಯಂಗ್ಯವಾಡಿದರು.

ಲೋಕಸಭಾ ಸದಸ್ಯರಾಗಿ ಮಂಡ್ಯ ಜಿಲ್ಲೆಗೆ ಒಂದುವರೆ ತಿಂಗಳಿಂದಲೂ ಬಂದಿಲ್ಲ. ನಾವು ಅವರ ಆರೋಗ್ಯ ಚನ್ನಾಗಿರಲಿ ಎಂದು ಆಶಿಸುತ್ತೇವೆ. ಪಾರ್ಲಿಮೆಂಟ್ ಗಳಿಗೆ ಹೋಗುತ್ತಾರೆ. ಪ್ರಧಾನ ಮಂತ್ರಿ ಮೋದಿ ಅವರ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ ಆದರೆ ಮಂಡ್ಯ ಗೆ ಯಾಕೆ ಬಂದಿಲ್ಲ ಎಂದು ಪ್ರಶ್ನಿಸಿದರು.

ಮಂಡ್ಯಗೆ ರಿಂಗ್ ರೋಡ್
ಮಂಡ್ಯದಲ್ಲಿ ರಿಂಗ್ ರೋಡ್ ಮಾಡಲು ಜಾಗ ಇನ್ನೂ ಅಂತಿಮವಾಗಿರುವುದಿಲ್ಲ. ಮಂಡ್ಯ ಮತ್ತು ಶ್ರೀರಂಗಪಟ್ಟಣ ಎರಡಕ್ಕೂ ಈ ಯೋಜನೆ ಸಂಬಂಧ ಪಟ್ಟಿರುವುದರಿಂದ ಇಬ್ಬರೂ ಶಾಸಕರೊಂದಿಗೆ ಚರ್ಚಿಸಿ ಮುಡಾ ಆಯುಕ್ತರು ಹಾಗೂ ಸಂಬಂಧಪಟ್ಟ ಪಂಚಾಯಿತಿಗಳನ್ನು ಕರೆದು ತೀರ್ಮಾನ ಕೈಗೊಳ್ಳಲಾಗುವುದು. ಸಂಸದ ಎಚ್.ಡಿ ಕುಮಾರಸ್ವಾಮಿ ಅವರು ರಿಂಗ್ ರೋಡ್ ನಿರ್ಮಾಣಕ್ಕೆ 900 ಕೋಟಿ ಅನುದಾನ ಕೊಡಿಸುವುದಾಗಿ ಹೇಳಿದ್ದಾರೆ. ಅವರು ಅನುದಾನ ನೀಡಿದರೆ ಮಂಡ್ಯದ ಸಂಜಯ್ ವೃತ್ತದಲ್ಲಿ ಸನ್ಮಾನ ಮಾಡೋಣ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ‌.ಉದಯ್ , ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

40 mins ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

3 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

6 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

6 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

6 hours ago