ಮಂಡ್ಯ: ಮೂವತ್ತು ವರ್ಷಕ್ಕೆ ಲೀಸ್ಗೆ ಕೊಟ್ಟಿದ್ದಾರೆ. ಅದರಲ್ಲೂ 45 ಸಾವಿರ ಕೋಟಿಗೆ 15 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ ಎಂದು ಹೆಸರೇಳದೇ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಕಸ ಎತ್ತಲೂ ಬ್ಲಾಕ್ಲೀಸ್ಟ್ನಲ್ಲಿ ಇರುವ ಗುತ್ತಿಗೆದಾರನಿಗೆ ಟೆಂಡರ್ ಕೊಟ್ಟಿದ್ದಾರೆ ಎಂದು ಹೆಸರೇಳದೇ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೂವತ್ತು ವರ್ಷಕ್ಕೆ ಲೀಸ್ಗೆ ಕೊಟ್ಟಿದ್ದಾರೆ. ಅದರಲ್ಲೂ 45 ಸಾವಿರ ಕೋಟಿಗೆ 15 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆಯಲು ಪೆನ್ನು ಪೇಪರ್ ಪಡೆದವರು ಮುಂದಾಗಿದ್ದಾರೆ. ಆದರೆ, ಮೂವತ್ತು ವರ್ಷಕ್ಕೆ ನಾವು ನೀವು ಬದುಕಿರಲ್ಲ ಎಂದಿದ್ದಾರೆ.
ಇನ್ನೂ ಮುಂದುವರಿದು ಮಾತನಾಡಿದ ಅವರು, ಈಗಾಗಲೇ ಎಸ್ಸಿ, ಎಸ್ಟಿ ಹಣ ಲೂಟಿ ಹೊಡೆದು ರಾಜಾರೋಷವಾಗಿ ಓಡಾಟ ನಡೆಸಿದ್ದಾರೆ. ಅಂತಹ ಭಂಡತನದ ರಾಜಕಾರಣ ನಾನು ಮಾಡಲ್ಲ ಎಂದು ಚಲುವರಾಯಸ್ವಾಮಿ ವಿರುದ್ಧ ಹೆಚ್ಡಿಕೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ನಿರ್ನಾಮ ಮಾಡಿದ್ದೇವೆ ಎಂಬ ನಿಮ್ಮ ಅಹಂಕಾರದ ಮಾತುಗಳು, ನಾನು ಲೋಕಸಭೆಗೆ ನಿಲ್ಲುವಂತೆ ಮಾಡಿತು. ನನ್ನ ಬಗ್ಗೆ ಏನು ಬೇಕಾದರೂ ಮಾತನಾಡಿ, ಆದರೆ ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಬೇಡಿ ಎಂದು ಕಿಡಿಕಾರಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…