ಮಂಡ್ಯ

15 ಸಾವಿರ ಕೋಟಿ ರೂ ಕಿಕ್‌ ಬ್ಯಾಕ್:‌ ಡಿಕೆಶಿ ವಿರುದ್ಧ ಎಚ್‌ಡಿಕೆ ಗಂಭೀರ ಆರೋಪ

ಮಂಡ್ಯ: ಮೂವತ್ತು ವರ್ಷಕ್ಕೆ ಲೀಸ್‌ಗೆ ಕೊಟ್ಟಿದ್ದಾರೆ. ಅದರಲ್ಲೂ 45 ಸಾವಿರ ಕೋಟಿಗೆ 15 ಸಾವಿರ ಕೋಟಿ ಕಿಕ್‌ ಬ್ಯಾಕ್‌ ಪಡೆಯಲು ಪೆನ್ನು ಪೇಪರ್‌ ಪಡೆದವರು ಮುಂದಾಗಿದ್ದಾರೆ ಎಂದು ಹೆಸರೇಳದೇ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕಸ ಎತ್ತಲೂ ಬ್ಲಾಕ್‌ಲೀಸ್ಟ್‌ನಲ್ಲಿ ಇರುವ ಗುತ್ತಿಗೆದಾರನಿಗೆ ಟೆಂಡರ್‌ ಕೊಟ್ಟಿದ್ದಾರೆ ಎಂದು ಹೆಸರೇಳದೇ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಂಡ್ಯದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೂವತ್ತು ವರ್ಷಕ್ಕೆ ಲೀಸ್‌ಗೆ ಕೊಟ್ಟಿದ್ದಾರೆ. ಅದರಲ್ಲೂ 45 ಸಾವಿರ ಕೋಟಿಗೆ 15 ಸಾವಿರ ಕೋಟಿ ಕಿಕ್‌ ಬ್ಯಾಕ್‌ ಪಡೆಯಲು ಪೆನ್ನು ಪೇಪರ್‌ ಪಡೆದವರು ಮುಂದಾಗಿದ್ದಾರೆ. ಆದರೆ, ಮೂವತ್ತು ವರ್ಷಕ್ಕೆ ನಾವು ನೀವು ಬದುಕಿರಲ್ಲ ಎಂದಿದ್ದಾರೆ.

ಇನ್ನೂ ಮುಂದುವರಿದು ಮಾತನಾಡಿದ ಅವರು, ಈಗಾಗಲೇ ಎಸ್‌ಸಿ, ಎಸ್‌ಟಿ ಹಣ ಲೂಟಿ ಹೊಡೆದು ರಾಜಾರೋಷವಾಗಿ ಓಡಾಟ ನಡೆಸಿದ್ದಾರೆ. ಅಂತಹ ಭಂಡತನದ ರಾಜಕಾರಣ ನಾನು ಮಾಡಲ್ಲ ಎಂದು ಚಲುವರಾಯಸ್ವಾಮಿ ವಿರುದ್ಧ ಹೆಚ್‌ಡಿಕೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್‌ ನಿರ್ನಾಮ ಮಾಡಿದ್ದೇವೆ ಎಂಬ ನಿಮ್ಮ ಅಹಂಕಾರದ ಮಾತುಗಳು, ನಾನು ಲೋಕಸಭೆಗೆ ನಿಲ್ಲುವಂತೆ ಮಾಡಿತು. ನನ್ನ ಬಗ್ಗೆ ಏನು ಬೇಕಾದರೂ ಮಾತನಾಡಿ, ಆದರೆ ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಬೇಡಿ ಎಂದು ಕಿಡಿಕಾರಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

56 mins ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

60 mins ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

1 hour ago