ಮಂಡ್ಯ

ನಾಲ್ವಡಿ, ಸರ್.ಎಂ.ವಿ. ಹೆಸರು ಉಳಿವಿಗೆ ಬದ್ದ : ಹೆಚ್‌ಡಿಕೆ

ಮಂಡ್ಯ : ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಈಗಾಗಲೇ ಪ್ರಯತ್ನ ಮಾಡುತ್ತಿದ್ದೇವೆ. 15 ರಿಂದ 18 ಸಾವಿರ ಕೋಟಿ ರೂ. ವೆಚ್ಚ ಮಾಡಿ ಕಾರ್ಖಾನೆಯನ್ನು ಪುನಾರಂಭಿಸಲಿದ್ದೇವೆ. ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ ಅವರ ಹೆಸರನ್ನೂ ನಾವು ಉಳಿಸುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು.

ನಗರದ ಮೈಶುಗರ್ ಪ್ರೌಢಶಾಲೆಯ ಮೈದಾನದಲ್ಲಿ ಶನಿವಾರ ನಡೆದ ಮೈಶುಗರ್ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಚ್‌ಎಂಟಿ ಉಳಿಸುವ ಪ್ರಯತ್ನಕ್ಕೂ ಕೈ ಹಾಕಿದ್ದೇವೆ. ಅದಕ್ಕೆ ರಾಜ್ಯ ಸರ್ಕಾರ ನಾನಾ ರೀತಿಯಲ್ಲಿ ಅಡ್ಡಿ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮೈಶುಗರ್ ಶಾಲೆ ಕಾಯಕಲ್ಪಕ್ಕೆ ನೀಲನಕ್ಷೆ ಸಿದ್ಧಪಡಿಸಿ
ಮೈಶುಗರ್ ಶಾಲೆ ಕಾಯಲ್ಪಕ್ಕೆ ನೆರವು ನೀಡಲು ಸದಾ ಸಿದ್ಧನಿದ್ದೇನೆ. ಈ ಶಾಲೆಯಲ್ಲಿ ಮೂವತ್ತು ಮಕ್ಕಳು ಓದುತ್ತಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಎಸ್‌ಎಸ್‌ಎಲ್‌ಸಿ ಜತೆಗೆ ಪಿಯುಸಿ ಬೋಧನೆಗೆ ಅರ್ಜಿ ಹಾಕಿಕೊಳ್ಳಿ. ಅದಕ್ಕೆ ಏನೇನು ಆಗಬೇಕೋ ಅದನ್ನು ನಾನು ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿದರು.

ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಏನೇನು ಮಾಡಬೇಕು ಎನ್ನುಬ ಬಗ್ಗೆ ಒಂದು ನೀಲನಕ್ಷೆ ಸಿದ್ಧ ಮಾಡಿ. ಅದಕ್ಕೆ ಅಗತ್ಯವಾದ ನೆರವು ನನ್ನಿಂದ ದೊರೆಯುತ್ತದೆ ಎಂದು ಹೇಳಿದರು.

ಎರಡು ಪ್ರಕರಣಗಳ ಬಗ್ಗೆ ವಿಷಾದ ವಾಹನ ತಪಾಸಣೆ ವೇಳೆ ಸಂಚಾರ ಪೊಲೀಸರ ಎಡವಟ್ಟಿನಿಂದ ಬಾಲಕಿ ಸಾವು ಹಾಗೂ ಮಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿ ಸಾವಿನ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಸಾವಿಗೆ ಪರಿಹಾರ ಕೊಡುವುದಾಗಿ ಹೇಳಿದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಪ್ರತಿಯೊಂದು ಜೀವವನ್ನು ದುಡ್ಡಿನಿಂದ ಅಳೆಯಲು ಸಾಧ್ಯವಿಲ್ಲ. ಇನ್ನಾದರೂ ಮಾನವನ ಜೀವಗಳಿಗೆ ಸರಿಯಾದ ಬೆಲೆ ಕೊಡುವುದನ್ನು ಕಲಿಯಲಿ ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

1 hour ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

9 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

12 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

13 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

15 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

18 hours ago