ಮಂಡ್ಯ

ನಾಲ್ವಡಿ, ಸರ್.ಎಂ.ವಿ. ಹೆಸರು ಉಳಿವಿಗೆ ಬದ್ದ : ಹೆಚ್‌ಡಿಕೆ

ಮಂಡ್ಯ : ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಈಗಾಗಲೇ ಪ್ರಯತ್ನ ಮಾಡುತ್ತಿದ್ದೇವೆ. 15 ರಿಂದ 18 ಸಾವಿರ ಕೋಟಿ ರೂ. ವೆಚ್ಚ ಮಾಡಿ ಕಾರ್ಖಾನೆಯನ್ನು ಪುನಾರಂಭಿಸಲಿದ್ದೇವೆ. ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ. ವಿಶ್ವೇಶ್ವರಯ್ಯ ಅವರ ಹೆಸರನ್ನೂ ನಾವು ಉಳಿಸುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದರು.

ನಗರದ ಮೈಶುಗರ್ ಪ್ರೌಢಶಾಲೆಯ ಮೈದಾನದಲ್ಲಿ ಶನಿವಾರ ನಡೆದ ಮೈಶುಗರ್ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಚ್‌ಎಂಟಿ ಉಳಿಸುವ ಪ್ರಯತ್ನಕ್ಕೂ ಕೈ ಹಾಕಿದ್ದೇವೆ. ಅದಕ್ಕೆ ರಾಜ್ಯ ಸರ್ಕಾರ ನಾನಾ ರೀತಿಯಲ್ಲಿ ಅಡ್ಡಿ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮೈಶುಗರ್ ಶಾಲೆ ಕಾಯಕಲ್ಪಕ್ಕೆ ನೀಲನಕ್ಷೆ ಸಿದ್ಧಪಡಿಸಿ
ಮೈಶುಗರ್ ಶಾಲೆ ಕಾಯಲ್ಪಕ್ಕೆ ನೆರವು ನೀಡಲು ಸದಾ ಸಿದ್ಧನಿದ್ದೇನೆ. ಈ ಶಾಲೆಯಲ್ಲಿ ಮೂವತ್ತು ಮಕ್ಕಳು ಓದುತ್ತಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಎಸ್‌ಎಸ್‌ಎಲ್‌ಸಿ ಜತೆಗೆ ಪಿಯುಸಿ ಬೋಧನೆಗೆ ಅರ್ಜಿ ಹಾಕಿಕೊಳ್ಳಿ. ಅದಕ್ಕೆ ಏನೇನು ಆಗಬೇಕೋ ಅದನ್ನು ನಾನು ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿದರು.

ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಏನೇನು ಮಾಡಬೇಕು ಎನ್ನುಬ ಬಗ್ಗೆ ಒಂದು ನೀಲನಕ್ಷೆ ಸಿದ್ಧ ಮಾಡಿ. ಅದಕ್ಕೆ ಅಗತ್ಯವಾದ ನೆರವು ನನ್ನಿಂದ ದೊರೆಯುತ್ತದೆ ಎಂದು ಹೇಳಿದರು.

ಎರಡು ಪ್ರಕರಣಗಳ ಬಗ್ಗೆ ವಿಷಾದ ವಾಹನ ತಪಾಸಣೆ ವೇಳೆ ಸಂಚಾರ ಪೊಲೀಸರ ಎಡವಟ್ಟಿನಿಂದ ಬಾಲಕಿ ಸಾವು ಹಾಗೂ ಮಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿ ಸಾವಿನ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಸಾವಿಗೆ ಪರಿಹಾರ ಕೊಡುವುದಾಗಿ ಹೇಳಿದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಪ್ರತಿಯೊಂದು ಜೀವವನ್ನು ದುಡ್ಡಿನಿಂದ ಅಳೆಯಲು ಸಾಧ್ಯವಿಲ್ಲ. ಇನ್ನಾದರೂ ಮಾನವನ ಜೀವಗಳಿಗೆ ಸರಿಯಾದ ಬೆಲೆ ಕೊಡುವುದನ್ನು ಕಲಿಯಲಿ ಎಂದು ಸಲಹೆ ನೀಡಿದರು.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

1 hour ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

2 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

3 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

4 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

4 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

8 hours ago