ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು.
ಮದ್ದೂರಿನಲ್ಲಿ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಹಾಗೂ ಮಂಡ್ಯದ ವಿಸಿ ಫಾರಂ ಗೇಟ್ ಬಳಿ ಮಾಜಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ಮಂಗಳವಾದ್ಯ, ಜಾನಪದ ಕಲಾತಂಡಗಳೊಂದಿಗೆ ಎಚ್ಡಿಕೆಯನ್ನು ಸ್ವಾಗತಿಸಲಾಯಿತು.
ಬಳಿಕ ಪಕ್ಷದ ಮುಖಂಡರು, ಬೆಂಬಲಿಗರು, ಕಾರ್ಯಕರ್ತರೊಂದಿಗೆ ಎಚ್ಡಿಕೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಗುತ್ತಿಗೆದಾರ ಶಂಕರೇಗೌಡ ಅವರು ಸಚಿವರಿಗೆ ದುಬಾರಿ ಚಿನ್ನದ ಸರವನ್ನು ಉಡುಗೊರೆಯಾಗಿ ನೀಡಿದರು.
ಈ ವೇಳೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು, ಮಂಡ್ಯದಲ್ಲಿ ಕಾರ್ಯಕರ್ತರು ನನ್ನ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಕ್ಕೆ ನಾನು ಅವರಿಗೆ ಚಿರಋಣಿ ಎಂದು ಹೇಳಿದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…