ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ ಕ್ರಾಸ್ ಬಳಿಯ ಹೆದ್ದಾರಿ ಟೋಲ್ ಪ್ಲಾಜಾ ಬಳಿ ಶನಿವಾರ ಜರುಗಿದೆ.
ತಾಲ್ಲೂಕಿನ ಬಿಜಿಪುರ ಹೋಬಳಿಯ ಹೊಸಹಳ್ಳಿ ಕ್ರಾಸ್ ಬಳಿಯ ಹೆದ್ದಾರಿ ಟೋಲ್ ಪ್ಲಾಜಾ ಬಳಿ ಶನಿವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಕೊಳ್ಳೇಗಾಲ ಹಾಗೂ ಮಳವಳ್ಳಿ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ರಭಸಕ್ಕೆ ಎರಡು ಕಾರುಗಳ ಮುಂಭಾಗ ನಜ್ಜು ಗುಜ್ಜಾಗಿರುವುದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಕಾರಿನಲ್ಲಿದ್ದ 10 ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಳುಗಳ ಪೈಕಿ ಬಹುತೇಕ ಮಹಿಳೆಯರಾಗಿದ್ದು ಬೆಂಗಳೂರಿನವರು ಎಂದು ತಿಳಿದು ಬಂದಿದೆ.
ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು ಎಲ್ಲರಿಗೂ ಪಟ್ಟಣದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಸಾಗಿಸಲಾಗಿದೆ. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಚಿಕ್ಕ ಮುತ್ತತ್ತಿ ದೇವಸ್ಥಾನಕ್ಕೆ ಹೋಗುತ್ತಿದ್ದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಸ್ಥಳದಲ್ಲೇ ನಿಂತು ತಕ್ಷಣ ಸ್ಥಳಕ್ಕೆ ಆಂಬುಲೆನ್ಸ್ ಬರುವಂತೆ ಮಾಡಿ ಗಾಯಾಳುಗಳು ಸಕಾಲಕ್ಕೆ ಆಸ್ಪತ್ರೆ ತಲುಪಲು ನೆರವಾಗಿದ್ದಾರೆ. ಎರಡು ವಾಹನಗಳನ್ನು ವಶಕ್ಕೆ ಪಡೆದಿರುವ ಬೆಳಕವಾಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…