ಮಂಡ್ಯ

ಆರೋಗ್ಯವೇ ಜೀವನದ ದೊಡ್ಡ ಆಸ್ತಿ : ಎನ್.ಚಲುವರಾಯಸ್ವಾಮಿ

ಮಂಡ್ಯ : ಬದುಕಲ್ಲಿ ಹಣ, ಅಂತಸ್ತು ಮತ್ತು ಅಧಿಕಾರವಿದ್ದು, ಆರೋಗ್ಯವಿಲ್ಲವಾದರೆ ಬದುಕೆ ವ್ಯರ್ಥ. ಆರೋಗ್ಯವೇ ಜೀವನದ ದೊಡ್ಡ ಆಸ್ತಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇಂದು ಮಿಮ್ಸ್ ಬೋಧಕ ಆಸ್ಪತ್ರೆಯ ಆಡಿಟೋರಿಯಂ ನಲ್ಲಿ ಆಯೋಜಿಸಲಾಗಿದ್ದ ಗೃಹ ಆರೋಗ್ಯ ಯೋಜನೆಯ ಕಾರ್ಯಗಾರ ಉದ್ಘಾಟನಾ ಕಾರ್ಯಕ್ರಮ ಹಾಗೂ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆಯ ವಿಸ್ತರಣೆ ಹಾಗೂ ಆಶಾ ಕೈಪಿಡಿ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಆರೋಗ್ಯವನ್ನು ಕಾನೂನು, ನೀತಿ, ನಿಬಂಧನೆಗಳಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಆದರೂ ಸಹ ಸರ್ಕಾರ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಗಾಗಿ ಮನೆ-ಮನೆಗೆ ತಲುಪಿ ಆರೋಗ್ಯ ತಪಾಸಣೆ ನಡೆಸಲು ಮುಂದಾಗಿದೆ. ರಾಜ್ಯದ ಪ್ರತಿಯೊಬ್ಬರೂ ಗೃಹ ಅರೋಗ್ಯ ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಬಡವರು, ವಯಸ್ಸಾದವರಿಗೆ ಹಾಗೂ ಅನಾರೋಗ್ಯವಿದ್ದು ಆಸ್ಪತ್ರೆಗಳಿಗೆ ಭೇಟಿ ನೀಡದವರಿಗೆ ಅನುಕೂಲವಾಗಬೇಕೆಂಬುವುದೇ ಗೃಹ ಅರೋಗ್ಯ ಯೋಜನೆಯ ಉದ್ದೇಶ. ಯೋಜನೆಯಡಿಯಲ್ಲಿ ಕೆಲಸ ನಿರ್ವಹಿಸುವ ಆರೋಗ್ಯ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಬಡವರಿಗೆ ಅನುಕೂಲವಾಗುವಂತೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಎಂದು ತಿಳಿ ಹೇಳಿದರು.

ಹಿಂದಿನ ಕಾಲದದಲ್ಲಿ ಜೀವನಶೈಲಿ ಉತ್ತಮವಾಗಿತ್ತು ಹಾಗೂ ವ್ಯವಸಾಯದಲ್ಲಿ ಯಾವುದೇ ರಾಸಾಯನಿಕ ಪದಾರ್ಥಗಳನ್ನು ಬಳಕೆ ಮಾಡುತ್ತಿರಲಿಲ್ಲ. ಆದರೆ, ಪ್ರಸ್ತುತ ಸಮಾಜದಲ್ಲಿ ಜೀವನಶೈಲಿ, ಆಹಾರ ಹಾಗೂ ವ್ಯವಸಾಯ ಪದ್ಧತಿ ಎಲ್ಲವೂ ಬದಲಾಗಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುತ್ತಿದೆ. ನಮ್ಮ ಆರೋಗ್ಯ ನಮ್ಮದೇ ಹೊಣೆಯಾಗಿರುತ್ತದೆ, ಎಲ್ಲರೂ ಆರೋಗ್ಯದ ಕಡೆ ಹೆಚ್ಚಿನ ಗಮನವಹಿಸಬೇಕು ಎಂದು ಹೇಳಿದರು.

ಸರ್ಕಾರ ಜಿಲ್ಲೆಯಲ್ಲಿ ಸಮುದಾಯ, ಜಿಲ್ಲಾ, ತಾಲ್ಲೂಕು ಹಾಗೂ ತಾಯಿ-ಮಗು ಆಸ್ಪತ್ರೆಗಳನ್ನು ತೆರೆಯಲು ಕ್ರಮಗಳನ್ನು ಕೈಗೊಂಡಿದೆ. ಆರೋಗ್ಯ ಬಹಳ ಮುಖ್ಯವಾದದ್ದು ಈ ನಿಟ್ಟಿನಲ್ಲಿ ಸರ್ಕಾರವು ಕೆಲಸ ನಿರ್ವಹಿಸುತ್ತಿದೆ. ನಿರಂತರ ಪ್ರಯತ್ನದಿಂದ ಅನೇಕ ಬದಲಾವಣೆಗಳನ್ನು ತರಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಆಶಾ ಕೈಪಿಡಿ ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್, ಮದ್ದೂರು ವಿಧಾನಸಭಾ ಕ್ಷೇತ್ರ ಶಾಸಕ ಕೆ.ಎಂ ಉದಯ, ಮೈಸೂರು ಕಂಪನಿ ನಿಯಮಿತ ಅಧ್ಯಕ್ಷರ ಸಿ.ಡಿ ಗಂಗಾಧರ, ಜಿಲ್ಲಾಧಿಕಾರಿ ಡಾ. ಕುಮಾರ, ಪೋಲಿಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ, ಮಿಮ್ಸ್ ಭೋದಕ ಆಸ್ಪತ್ರೆ ನಿರ್ದೇಶಕ ಡಾ. ಪಿ.ನರಸಿಂಹಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 mins ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

5 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

5 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

5 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

5 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

5 hours ago