ಮಂಡ್ಯ

ಹೃದಯಕ್ಕೆ ಹಿಡಿಸುವ ಭಾಷೆ ಕನ್ನಡ: ನ್ಯಾ. ಇ.ಎಸ್‌ ಇಂದ್ರೇಶ್

ಮಂಡ್ಯ: ನಮಗೆ ಎಷ್ಟೇ ಭಾಷೆ ಗೊತ್ತಿದ್ದರೂ ನಮ್ಮ ಮಾತೃ ಭಾಷೆ‌ ಕನ್ನಡದಲ್ಲಿ ಮಾತನಾಡಿದಾಗಲೇ ಭಾಷೆ ಹೃದಯಕ್ಕೆ ಹಿಡಿಸುವುದು ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್ ಇಂದ್ರೇಶ್ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ʻನಾವಾಡುವ ನುಡಿಯೇ ಕನ್ನಡ ನುಡಿʼ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ಮನೆಯಲ್ಲಿಯೂ ಕನ್ನಡ ಭಾಷೆಯಲ್ಲಿಯೇ ಮಾತನಾಡಿ, ಕನ್ನಡ ಪತ್ರಿಕೆಗಳನ್ನು ಓದಿ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರ ಬಗ್ಗೆ ಪ್ರತಿ ಮನೆಯ ಮಕ್ಕಳಿಗೂ ತಿಳಿಸಬೇಕು. ಈ ಮೂಲಕ ಕನ್ನಡ ಕಂಪಿನ ಬಗ್ಗೆ ಯುವ ಸಮೂಹದಲ್ಲಿ ಜ್ಞಾನ ವೃದ್ಧಿ ಮಾಡಬೇಕು ಎಂದರು.

ಮಂಡ್ಯ ಜನತೆ ಪ್ರೀತಿ ವಿಶ್ವಾಸದಲ್ಲಿ ಮೇಲುಗೈ ಸಾಧಿಸಿರುವವರು. ಅಪ್ಪಟ ಕನ್ನಡಾಭಿಮಾನವನ್ನು ಹೊಂದಿರುವ ನೆಲದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿರುವುದು ನಿಜಕ್ಕೂ ಸಂತಸದ ಸಂಗತಿ ಎಂದು ಹೇಳಿದರು.

ಸಾಹಿತ್ಯ ಸಮ್ಮೇಳನ ಐಕ್ಯತೆಯ ಸಂಕೇತ
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಜಿಲ್ಲೆಯಲ್ಲಿ ಡಿಸೆಂಬರ್ 20,21,22ರಂದು ಮೂರು ದಿನಗಳ ಕಾಲ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡದ ಐಕ್ಯತೆಯ ಸಂಕೇತವಾಗಿದೆ ಎಂದು ಹೇಳಿದರು.

ಈ ಸಾಹಿತ್ಯ ಸಮ್ಮೇಳನ ಜಿಲ್ಲೆಗೆ ಮಾತ್ರ ಸೀಮಿತವಲ್ಲ. ಪ್ರತಿಯೊಬ್ಬರ ಮನ-ಮನೆಯ ಹಬ್ಬವಾಗಿದೆ. ಹೀಗಾಗಿ ಎಲ್ಲರೂ ಒಟ್ಟಿಗೆ ಸೇರಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸೋಣ ಎಂದು ನುಡಿದರು.

ದೇಸಿ ಸಾಹಿತ್ಯ ಇಂದಿಗೂ ಕೂಡ ಉಳಿದಿದೆ ಎಂದರೆ ಅದಕ್ಕೆ ಮೂಲ ಕಾರಣ ಜಿಲ್ಲೆಯ ಜನತೆ. ರಾಜ್ಯದಲ್ಲಿಯೇ ಅತಿ ಹೆಚ್ಚು ಕನ್ನಡ ಮಾತನಾಡುವವರ ಸಂಖ್ಯೆ ಹೆಚ್ಚಿರುವುದು ಜಿಲ್ಲೆಯಲ್ಲಿಯೇ. ಹೀಗಾಗಿ, ಈ ಬಾರಿಯ ಸಾಹಿತ್ಯ ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಜನತೆಯ ಸಹಕಾರದಿಂದ ಅತ್ಯಂತ ಸಂತೋಷದ ವಿಜ್ರಂಭಣೆಯಿಂದ ಆಚರಿಸೋಣ ಎಂದು ಕರೆ ನೀಡಿದರು.

ಕಪ್ಪು ಮಣ್ಣಿನ ವೈವಿಧ್ಯಮಯ ರಾಜ್ಯವಾದ ಕರ್ನಾಟಕದಲ್ಲಿ ನಾವೆಲ್ಲರೂ ಜನಿಸಿರುವುದೇ ಪುಣ್ಯ. ಕನ್ನಡವನ್ನು ಮಾತೃ ಭಾಷೆಯನ್ನಾಗಿ ಮಾಡಿಕೊಂಡು ನಮ್ಮ ಹೃದಯದವನ್ನು ಸಹ ಹಸನುಗೊಳಿಸಿಕೊಂಡಿದ್ದೇವೆ. ಕನ್ನಡ ಸಾಹಿತ್ಯ ಸಂಗೀತದ ಮಜಲುಗಳನ್ನು ಹುಟ್ಟುಹಾಕಿದೆ. ಹೀಗಾಗಿ ಎಲ್ಲರೂ ಕನ್ನಡದಲ್ಲಿಯೇ ವ್ಯವಹರಿಸಿ. ಪ್ರತಿಯೊಬ್ಬರೂ ಕೂಡ ಕನ್ನಡ ಭಾಷೆಯಲ್ಲಿಯೇ ಪ್ರತಿಕ್ರಿಯೆ ನೀಡಿ ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ನಾಡೋಜ ಮಹೇಶ್‌ ಜೋಶಿ ಹೇಳಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಶ್ರೀರಂಗಪಟ್ಟಣ ಶ್ರೀ ಕ್ಷೇತ್ರ ಬೇಬಿ ಮಠ ಮತ್ತು ಚಂದ್ರವನ ಆಶ್ರಮದ ಪೀಠಾಧ್ಯಕ್ಷರಾದ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ಬೆಂಗಳೂರು ಪೊಲೀಸ್ ಹೆಚ್ಚುವರಿ ಮಹಾ ನಿರ್ದೇಶಕ ನಂಜುಂಡಸ್ವಾಮಿ, ಕೇಂದ್ರ ವಲಯ ಇನ್ಸ್ಪೆಕ್ಟರ್ ಬಿ.ಆರ್ ರವಿಕಾಂತೇಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಿರಿಯ ಸಾಹಿತಿ ಕೆ. ಸತ್ಯನಾರಾಯಣ, ಮೈಸೂರು ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಪದ್ಮ ಶೇಖರ್, ಹಿರಿಯ ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ, ನಿವೃತ್ತ ಕನ್ನಡ ಪ್ರಾಧ್ಯಾಪಕ ಮತ್ತು ಕನ್ನಡ ವಾಗ್ಮಿ ಪ್ರೊ.ಎಂ. ಕೃಷ್ಣಗೌಡ, ಚಲನಚಿತ್ರ ಗೀತಾ ರಚನಕಾರರು ಮತ್ತು ನಿರ್ದೇಶಕರಾದ ಕವಿರತ್ನ ಡಾ.ವಿ.ನಾಗೇಂದ್ರ ಪ್ರಸಾದ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

1 hour ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

1 hour ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

1 hour ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

9 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

9 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

9 hours ago