ಮಂಡ್ಯ

ಹೃದಯಕ್ಕೆ ಹಿಡಿಸುವ ಭಾಷೆ ಕನ್ನಡ: ನ್ಯಾ. ಇ.ಎಸ್‌ ಇಂದ್ರೇಶ್

ಮಂಡ್ಯ: ನಮಗೆ ಎಷ್ಟೇ ಭಾಷೆ ಗೊತ್ತಿದ್ದರೂ ನಮ್ಮ ಮಾತೃ ಭಾಷೆ‌ ಕನ್ನಡದಲ್ಲಿ ಮಾತನಾಡಿದಾಗಲೇ ಭಾಷೆ ಹೃದಯಕ್ಕೆ ಹಿಡಿಸುವುದು ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಇ.ಎಸ್ ಇಂದ್ರೇಶ್ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ʻನಾವಾಡುವ ನುಡಿಯೇ ಕನ್ನಡ ನುಡಿʼ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ಮನೆಯಲ್ಲಿಯೂ ಕನ್ನಡ ಭಾಷೆಯಲ್ಲಿಯೇ ಮಾತನಾಡಿ, ಕನ್ನಡ ಪತ್ರಿಕೆಗಳನ್ನು ಓದಿ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರ ಬಗ್ಗೆ ಪ್ರತಿ ಮನೆಯ ಮಕ್ಕಳಿಗೂ ತಿಳಿಸಬೇಕು. ಈ ಮೂಲಕ ಕನ್ನಡ ಕಂಪಿನ ಬಗ್ಗೆ ಯುವ ಸಮೂಹದಲ್ಲಿ ಜ್ಞಾನ ವೃದ್ಧಿ ಮಾಡಬೇಕು ಎಂದರು.

ಮಂಡ್ಯ ಜನತೆ ಪ್ರೀತಿ ವಿಶ್ವಾಸದಲ್ಲಿ ಮೇಲುಗೈ ಸಾಧಿಸಿರುವವರು. ಅಪ್ಪಟ ಕನ್ನಡಾಭಿಮಾನವನ್ನು ಹೊಂದಿರುವ ನೆಲದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗುತ್ತಿರುವುದು ನಿಜಕ್ಕೂ ಸಂತಸದ ಸಂಗತಿ ಎಂದು ಹೇಳಿದರು.

ಸಾಹಿತ್ಯ ಸಮ್ಮೇಳನ ಐಕ್ಯತೆಯ ಸಂಕೇತ
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಜಿಲ್ಲೆಯಲ್ಲಿ ಡಿಸೆಂಬರ್ 20,21,22ರಂದು ಮೂರು ದಿನಗಳ ಕಾಲ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡದ ಐಕ್ಯತೆಯ ಸಂಕೇತವಾಗಿದೆ ಎಂದು ಹೇಳಿದರು.

ಈ ಸಾಹಿತ್ಯ ಸಮ್ಮೇಳನ ಜಿಲ್ಲೆಗೆ ಮಾತ್ರ ಸೀಮಿತವಲ್ಲ. ಪ್ರತಿಯೊಬ್ಬರ ಮನ-ಮನೆಯ ಹಬ್ಬವಾಗಿದೆ. ಹೀಗಾಗಿ ಎಲ್ಲರೂ ಒಟ್ಟಿಗೆ ಸೇರಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸೋಣ ಎಂದು ನುಡಿದರು.

ದೇಸಿ ಸಾಹಿತ್ಯ ಇಂದಿಗೂ ಕೂಡ ಉಳಿದಿದೆ ಎಂದರೆ ಅದಕ್ಕೆ ಮೂಲ ಕಾರಣ ಜಿಲ್ಲೆಯ ಜನತೆ. ರಾಜ್ಯದಲ್ಲಿಯೇ ಅತಿ ಹೆಚ್ಚು ಕನ್ನಡ ಮಾತನಾಡುವವರ ಸಂಖ್ಯೆ ಹೆಚ್ಚಿರುವುದು ಜಿಲ್ಲೆಯಲ್ಲಿಯೇ. ಹೀಗಾಗಿ, ಈ ಬಾರಿಯ ಸಾಹಿತ್ಯ ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಜನತೆಯ ಸಹಕಾರದಿಂದ ಅತ್ಯಂತ ಸಂತೋಷದ ವಿಜ್ರಂಭಣೆಯಿಂದ ಆಚರಿಸೋಣ ಎಂದು ಕರೆ ನೀಡಿದರು.

ಕಪ್ಪು ಮಣ್ಣಿನ ವೈವಿಧ್ಯಮಯ ರಾಜ್ಯವಾದ ಕರ್ನಾಟಕದಲ್ಲಿ ನಾವೆಲ್ಲರೂ ಜನಿಸಿರುವುದೇ ಪುಣ್ಯ. ಕನ್ನಡವನ್ನು ಮಾತೃ ಭಾಷೆಯನ್ನಾಗಿ ಮಾಡಿಕೊಂಡು ನಮ್ಮ ಹೃದಯದವನ್ನು ಸಹ ಹಸನುಗೊಳಿಸಿಕೊಂಡಿದ್ದೇವೆ. ಕನ್ನಡ ಸಾಹಿತ್ಯ ಸಂಗೀತದ ಮಜಲುಗಳನ್ನು ಹುಟ್ಟುಹಾಕಿದೆ. ಹೀಗಾಗಿ ಎಲ್ಲರೂ ಕನ್ನಡದಲ್ಲಿಯೇ ವ್ಯವಹರಿಸಿ. ಪ್ರತಿಯೊಬ್ಬರೂ ಕೂಡ ಕನ್ನಡ ಭಾಷೆಯಲ್ಲಿಯೇ ಪ್ರತಿಕ್ರಿಯೆ ನೀಡಿ ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ನಾಡೋಜ ಮಹೇಶ್‌ ಜೋಶಿ ಹೇಳಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಶ್ರೀರಂಗಪಟ್ಟಣ ಶ್ರೀ ಕ್ಷೇತ್ರ ಬೇಬಿ ಮಠ ಮತ್ತು ಚಂದ್ರವನ ಆಶ್ರಮದ ಪೀಠಾಧ್ಯಕ್ಷರಾದ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ, ಬೆಂಗಳೂರು ಪೊಲೀಸ್ ಹೆಚ್ಚುವರಿ ಮಹಾ ನಿರ್ದೇಶಕ ನಂಜುಂಡಸ್ವಾಮಿ, ಕೇಂದ್ರ ವಲಯ ಇನ್ಸ್ಪೆಕ್ಟರ್ ಬಿ.ಆರ್ ರವಿಕಾಂತೇಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಕ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಿರಿಯ ಸಾಹಿತಿ ಕೆ. ಸತ್ಯನಾರಾಯಣ, ಮೈಸೂರು ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಪದ್ಮ ಶೇಖರ್, ಹಿರಿಯ ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ, ನಿವೃತ್ತ ಕನ್ನಡ ಪ್ರಾಧ್ಯಾಪಕ ಮತ್ತು ಕನ್ನಡ ವಾಗ್ಮಿ ಪ್ರೊ.ಎಂ. ಕೃಷ್ಣಗೌಡ, ಚಲನಚಿತ್ರ ಗೀತಾ ರಚನಕಾರರು ಮತ್ತು ನಿರ್ದೇಶಕರಾದ ಕವಿರತ್ನ ಡಾ.ವಿ.ನಾಗೇಂದ್ರ ಪ್ರಸಾದ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಬಂದ್‌

ಶಿವಮೊಗ್ಗ: ಕೊಡಗಿನ ದುಬಾರೆ ಆನೆ ಬಿಡಾರದಲಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು…

25 mins ago

ಟ್ರೆಂಡ್‌ ಸೃಷ್ಟಿಸಿದ ಕಾಕ್ರೋಚ್‌ ಜನತಾ ಪಾರ್ಟಿ ; ಚಳವಳಿಯಾಗಿ ಬದಲಾದ ಸಿಜೆಪಿ

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…

2 hours ago

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

6 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

8 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

16 hours ago