heavy rain shrirangapattana
ಶ್ರೀರಂಗಪಟ್ಟಣ: ಮಂಗಳವಾರ ರಾತ್ರಿ ತಾಲೂಕಿನಾದ್ಯಂತ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಬೃಹತ್ ಗಾತ್ರದ ಮರಗಳು, ವಿದ್ಯುತ್ ಕಂಬಗಳು ಸೇರಿದಂತೆ ಬಾಳೆ ತೋಟ ಸಂಪೂರ್ಣವಾಗಿ ಧರೆಗುಳಿರುವ ಘಟನೆ ನಡೆದಿದೆ.
ತಾಲೂಕಿನ ಕಾರೇಕುರ ಗೇಟ್ ಹಾಗೂ ಪಂಪ್ಹೌಸ್ ಬಳಿ ಪ್ರತ್ಯೇಕವಾಗಿ ಎರಡು ಬೃಹತ್ ಗಾತ್ರದ ನೀಲಗಿರಿ ಮರಗಳು ಮಂಗಳವಾರ ರಾತ್ರಿ 9 ಗಂಟೆ ಸಮಯದಲ್ಲಿ ನೆಲಕ್ಕುರುಳಿದ್ದು, ಇದರಿಂದ ಪಶ್ಚಿಮವಾಹಿನಿ- ಕೆಆರ್ಎಸ್ ರಸ್ತೆ ಸಂಪೂರ್ಣವಾಗಿ ಅಸ್ಥವೆಸ್ತಗೊಂಡಿತ್ತು. ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ಹೆದ್ದಾರಿಯಲ್ಲಿ ಬಿದಿದ್ದ ಮರಗಳನ್ನು ತೆರವುಗಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಬಾಳೆ ತೋಟ ನಾಶ
ತಾಲೂಕಿನ ಅರಕೆರೆ ಗ್ರಾಮದ ಕೆ.ರಾಜು ಎಂಬುವವರಿಗೆ ಸೇರಿದ್ದ ಸುಮಾರು 2.3 ಎಕರೆಯಲ್ಲಿ ಬೆಳೆದಿದ್ದ ಬಾಳೆ ತೋಟೆ ಬಿರುಗಾಳಿಯಿಂದಾಗಿ ಸಂಪೂರ್ಣವಾಗಿ ನೆಲಕಚ್ಚಿದೆ. ಇದರಿಂದ ಫಸಲು ಕೈಗೆ ಸಿಗುವ ವೇಳೆ ಇಂತಹ ಘಟನೆ ಸಂಬಭವಿಸಿದ್ದು ರೈತ ಕಂಗಾಲಾಗಿದ್ದಾರೆ.
ಹಾರಿದ ಕಲ್ನಾರ್ ಶೀಟ್
ತಾಲೂಕಿನ ಮಹದೇವಪುರ ಗ್ರಾಮದ ಪುಟ್ಟಸ್ವಾಮಿ ಎಂಬುವವರ ಮನೆ ಮೇಲಿನ ಸೀಟ್ಗಳು ಸಂಪೂರ್ಣವಾಗಿ ಹಾರಿ ಹೋಗಿದ್ದು, ಪುಟ್ಟಸ್ವಾಮಿ ಕಂಗಾಲಾಗಿದ್ದಾರೆ.
ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾತನಾಡಿ, ತಾಲೂಕಿನಾದ್ಯಂತ ಬಾರಿ ಮಳೆಯಿಂದಾಗಿ ರೈತರ ಬೆಳೆಗಳು ಸೇರಿದಂತೆ ಅನೇಕ ಮನೆಗಳು ಅನಾಹುತ ಸಂಬವಿಸಿರುವುದು ಕಂಡುಬಂದಿದೆ. ಹಾನಿಯಾಗಿರುವ ಬಗ್ಗೆ ಸೂಕ್ತ ಮಾಹಿತಿಯೊಂದಿಗೆ ಅರ್ಜಿ ನೀಡುವಂತೆ ತಿಳಿಸಲಾಗಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸೂಕ್ತ ಪರಿಹಾರ ನೀಡಲು ಕ್ರಮ ವಹಿಸಲಾಗುವುದು ಎಂದಿದ್ದಾರೆ
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…